ಗುರುವಾರ, ಜುಲೈ 9, 2009

ವಿಜ್ಞಾನ ಸಾಹಿತ್ಯ ಪಿತಾಮಹ - ಶ್ರೀ ಬೆಳ್ಳಾವೆ ವೆಂಕಟನಾರಣಪ್ಪ

ಸನ್ಮಾನ್ಯ ಶ್ರೀ ಬೆಳ್ಳಾವೆ ವೆಂಕಟನಾರಣಪ್ಪನವರು (ಫೆಬ್ರವರಿ ೧೮೭೨ - ಆಗಸ್ಟ್ ೧೯೪೩) ಕನ್ನಡದ ಮೊದಲ ವಿಜ್ಞಾನ ಲೇಖಕರಲ್ಲೊಬ್ಬರು, ಕನ್ನಡದಲ್ಲಿ ವಿಜ್ಞಾನವನ್ನು ಪರಿಣಾಮಕಾರಿಯಾಗಿ ವಿವರಿಸಲು ಸಾಧ್ಯ ಎಂದು ತೋರಿಸಿಕೊಟ್ಟವರು.

ಬೆ.ವೆಂ. ಅವರು ಬೆಂಗಳೂರಿನ ಸೆಂಟ್ರಲ್ ಕಾಲೇಜಿನಲ್ಲಿ ಭೌತಶಾಸ್ತ್ರದ ಪ್ರಾಧ್ಯಾಪಕರಾಗಿದ್ದರು. ಭೌತಶಾಸ್ತ್ರವಷ್ಟೆ ಅಲ್ಲದೆ ಜೀವಶಾಸ್ತ್ರದಲ್ಲಿ ಕೂಡ ಅವರಿಗೆ ಪ್ರಾವೀಣ್ಯವಿತ್ತು. ೧೯೩೦ರ ದಶಕದಲ್ಲಿ ಪ್ರಕಟವಾದ ಅವರ 'ಜೀವವಿಜ್ಞಾನ' ಕೃತಿ (ಮೈಸೂರು ವಿವಿ ಪ್ರಕಟಣೆ) ಕನ್ನಡ ವಿಜ್ಞಾನ ಸಾಹಿತ್ಯದ ಇತಿಹಾಸದಲ್ಲೇ ಅತ್ಯಂತ ಗಮನಾರ್ಹ ಸ್ಥಾನ ಪಡೆದುಕೊಂಡಿದೆ.

ಕನ್ನಡ ಹಾಗೂ ವಿಜ್ಞಾನಗಳೆರಡರ ಬಗೆಗೂ ಅಪಾರ ಕಳಕಳಿ ಹೊಂದಿದ್ದ ಅವರು ಸೆಂಟ್ರಲ್ ಕಾಲೇಜಿನ ಕರ್ಣಾಟಕ ಸಂಘದ ಅಧ್ಯಕ್ಷರಾಗಿ, ಸಾಹಿತ್ಯ ಪರಿಷತ್ತಿನ ಸಂಸ್ಥಾಪಕರಲ್ಲೊಬ್ಬರಾಗಿ ಸೇವೆಸಲ್ಲಿಸಿದ್ದರು. 'ಕರ್ಣಾಟಕ ವಿಜ್ಞಾನ ಪ್ರಚಾರಿಣೀ ಸಮಿತಿ'ಯ ಮೂಲಕ ವಿಜ್ಞಾನ ಎಂಬ ಮಾಸಪತ್ರಿಕೆ ನಡೆಸುತ್ತಿದ್ದರು; ಕನ್ನಡದಲ್ಲಿ ವಿಜ್ಞಾನ ಪ್ರಚಾರಕ್ಕೆ ಮಾರ್ಗದರ್ಶಕರಾಗಿದ್ದರು.

ಬೆ.ವೆಂ.ರವರ ಚಿತ್ರ ನನಗೆ ಸಿಕ್ಕಿದ್ದು ಮತ್ತೊಬ್ಬ ಅದ್ವಿತೀಯ ವಿಜ್ಞಾನ ಬರಹಗಾರ ಡಾ. ಬಿ.ಜಿ.ಎಲ್.ಸ್ವಾಮಿಯವರ 'ಪಂಚಕಲಶ ಗೋಪುರ' ಕೃತಿಯಲ್ಲಿ. ಈ ಕೃತಿಯಲ್ಲಿ ಬೆ.ವೆಂ.ರವರ ಆತ್ಮೀಯ ಪರಿಚಯ ಕೂಡ ಇದೆ.

ಇದೊಂದು ಅಪೂರ್ಣ ಬರಹ. ಬೆ.ವೆಂ.ರವರ ಬಗ್ಗೆ, ಅವರ ಕೃತಿಗಳ ಬಗ್ಗೆ ನಿಮ್ಮಲ್ಲಿರುವ ಮಾಹಿತಿ ಹಂಚಿಕೊಳ್ಳಿ!

2 ಕಾಮೆಂಟ್‌ಗಳು:

Unknown ಹೇಳಿದರು...

ವಿಜ್ಞಾನ ಪುಸ್ತಕವು sirinudi.com ನಲ್ಲಿ ದೊರೆಯುತ್ತದೆ

Unknown ಹೇಳಿದರು...

ವಿಜ್ಞಾನ ಪುಸ್ತಕವು sirinudi.com ನಲ್ಲಿ ದೊರೆಯುತ್ತದೆ

badge