ಬುಧವಾರ, ಸೆಪ್ಟೆಂಬರ್ 2, 2009

ಕರ್ನಾಟಕ ವಿಜ್ಞಾನ ಮತ್ತು ತಂತ್ರಜ್ಞಾನ ಸಮ್ಮೇಳನ

ಎರಡನೇ ಕರ್ನಾಟಕ ವಿಜ್ಞಾನ ಮತ್ತು ತಂತ್ರಜ್ಞಾನ ಸಮ್ಮೇಳನ ಇದೇ ತಿಂಗಳಿನ ೨೩ ಹಾಗೂ ೨೪ರಂದು ಗುಲಬರ್ಗಾದಲ್ಲಿ ನಡೆಯಲಿದೆ. ಸೆಪ್ಟೆಂಬರ್ ೨೩ರ ಬೆಳಿಗ್ಗೆ ೧೧ ಗಂಟೆಗೆ ಮುಖ್ಯಮಂತ್ರಿಗಳು ಸಮ್ಮೇಳನ ಉದ್ಘಾಟಿಸಲಿದ್ದಾರೆ.

'ಮನುಕುಲದ ಒಳಿತಿಗಾಗಿ ವಿಜ್ಞಾನ-ತಂತ್ರಜ್ಞಾನ' ಈ ಸಮ್ಮೇಳನದ ಪ್ರಮುಖ ವಿಷಯ. ಎರಡು ದಿನಗಳ ಅವಧಿಯಲ್ಲಿ ಈ ವಿಷಯದ ವಿವಿಧ ಆಯಾಮಗಳಿಗೆ ಸಂಬಂಧಿಸಿದ ಅನೇಕ ವಿಚಾರಸಂಕಿರಣಗಳು ನಡೆಯಲಿವೆ. ಪ್ರೊ ಯು ಆರ್ ರಾವ್, ಪ್ರೊ ಪಿ ಬಲರಾಂ, ಪ್ರೊ ಎಂ ಐ ಸವದತ್ತಿ, ಪ್ರೊ ರೊದ್ದಂ ನರಸಿಂಹ, ಡಾ ವಿ ಪ್ರಕಾಶ್, ಡಾ ಪಿ ಎಸ್ ಶಂಕರ್, ಶ್ರೀ ನಾಗೇಶ ಹೆಗಡೆ - ಇವರು ಭಾಷಣಕಾರರಲ್ಲಿ ಪ್ರಮುಖರು.

ಸಮ್ಮೇಳನದ ಸಂದರ್ಭದಲ್ಲಿ ವಸ್ತುಪ್ರದರ್ಶನ ಆಯೋಜಿಸಲಾಗಿದೆ. ಇದೇ ಸಂದರ್ಭದಲ್ಲಿ 'ವಿಜ್ಞಾನ ಲೋಕ' ಪತ್ರಿಕೆಯ ವಿಶೇಷ ಸಂಚಿಕೆಯನ್ನೂ ಹೊರತರಲಾಗುವುದು.

ಸಮ್ಮೇಳನದಲ್ಲಿ ಭಾಗವಹಿಸಲು ಯಾವುದೇ ನೋಂದಣಿ ಶುಲ್ಕ ಇಲ್ಲ. ಹೆಚ್ಚಿನ ವಿವರಗಳಿಗೆ ಸಮ್ಮೇಳನದ ಸಂಘಟನಾ ಕಾರ್ಯದರ್ಶಿಯವರನ್ನು gugksta09@rediffmail.com ವಿಳಾಸದಲ್ಲಿ ಸಂಪರ್ಕಿಸಬಹುದು.
badge