ಮಂಗಳವಾರ, ಮಾರ್ಚ್ 29, 2011

ಟ್ವೀಟರ್ ಚಿಲಿಪಿಲಿಗೆ ಹ್ಯಾಪಿ ಬರ್ತ್‌ಡೇ

ಟಿ ಜಿ ಶ್ರೀನಿಧಿ

ಭಾರತ - ಆಸ್ಟ್ರೇಲಿಯಾ ಮ್ಯಾಚು ನೋಡ್ತಾ ಇದೀನಿ

ನಾನೂ ಅಷ್ಟೆ, ಸಖತ್ತಾಗಿದೆ ಮ್ಯಾಚು!

ಛೆ, ನಾನು ಮಿಸ್ ಮಾಡ್ಕೊತಿದೀನಿ, ಆಫೀಸಲ್ಲಿ ತುಂಬಾ ಕೆಲ್ಸ

ಬುಧವಾರ, ಮಾರ್ಚ್ 23, 2011

ಜಪಾನ್‌ಗಾಗಿ ಮಿಡಿದ ಜಾಲಲೋಕದ ಹೃದಯ

ಟಿ ಜಿ ಶ್ರೀನಿಧಿ

ಭೂಕಂಪ, ಸುನಾಮಿ, ವಿಕಿರಣ ಸೋರಿಕೆ, ಜ್ವಾಲಾಮುಖಿ ಸ್ಫೋಟ - ಒಂದರ ಹಿಂದೆ ಒಂದರಂತೆ ಬಂದೆರಗುತ್ತಿರುವ ಸಮಸ್ಯೆಗಳಿಂದ ಜಪಾನ್ ದೇಶ ತತ್ತರಿಸಿಹೋಗಿದೆ. ಈ ಸಮಸ್ಯೆಗಳ ಗಂಭೀರತೆ ಎಷ್ಟಿದೆಯೆಂದರೆ ವಿಶ್ವದ ಎಲ್ಲ ಮಾಧ್ಯಮಗಳೂ ಜಪಾನಿನ ಸುದ್ದಿಗಳನ್ನು ನಮಗೆ ನಿರಂತರವಾಗಿ ತಲುಪಿಸುತ್ತಿವೆ. ಸಾಲುಸಾಲು ದುರಂತಗಳ ಸಂತ್ರಸ್ತರಿಗಾಗಿ ಇಡೀ ಪ್ರಪಂಚವೇ ಮರುಗುತ್ತಿದೆ.

ಹೀಗಿರುವಾಗ ಅಂತರಜಾಲ ಲೋಕ ಸುಮ್ಮನಿರುವುದು ಸಾಧ್ಯವೆ?

ಮಂಗಳವಾರ, ಮಾರ್ಚ್ 22, 2011

ವಿಜ್ಞಾನ ಜಗತ್ತು ೨೦೧೦

ಪ್ರತಿವರ್ಷ ವಿಜ್ಞಾನ ತಂತ್ರಜ್ಞಾನ ಕ್ಷೇತ್ರದಲ್ಲಿ ಆಗುವ ಸಾಧನೆಗಳನ್ನು ಆಯಾ ವರ್ಷದ ಕೊನೆಯಲ್ಲಿ ಇಯರ್ ಬುಕ್ ರೂಪದಲ್ಲಿ ಪ್ರಕಟಿಸುವ ಅಭ್ಯಾಸ ಇಂಗ್ಲಿಷಿನಲ್ಲಿದೆ. ಆದರೆ ಈ ಕೆಲಸ ಈವರೆಗೆ ಕನ್ನಡದಲ್ಲಿ ಆಗಿರಲಿಲ್ಲ. ಗುಲ್ಬರ್ಗಾದ ಡಾ. ಪಿ. ಎಸ್. ಶಂಕರ್ ಪ್ರತಿಷ್ಠಾನ ಇತ್ತೀಚೆಗೆ ಪ್ರಕಟಿಸಿರುವ 'ವಿಜ್ಞಾನ ಜಗತ್ತು ೨೦೧೦' ಕೃತಿ ಕನ್ನಡದಲ್ಲಿ ಈ ಬಗೆಯ ಪುಸ್ತಕಗಳ ಕೊರತೆಯನ್ನು ತುಂಬಿಕೊಡುವತ್ತ ಮೊದಲ ಹೆಜ್ಜೆ ಇಟ್ಟಿದೆ.

ಮಂಗಳವಾರ, ಮಾರ್ಚ್ 15, 2011

ಕುಕಿ ಕರಾಮತ್ತು

ಟಿ ಜಿ ಶ್ರೀನಿಧಿ

ಗಣಕಲೋಕದಲ್ಲಿ ವಿಚಿತ್ರವಾದುದೊಂದು ಅಭ್ಯಾಸ ಇದೆ. ನಿತ್ಯದ ಬಳಕೆಯಲ್ಲಿರುವ ಪರಿಚಿತ ಹೆಸರುಗಳನ್ನು ಅನೇಕ ಸಂದರ್ಭಗಳಲ್ಲಿ ಗಣಕವಿಜ್ಞಾನಿಗಳು ತಮ್ಮ ಕೆಲಸದಲ್ಲೂ ಬಳಸಿಕೊಂಡುಬಿಡುತ್ತಾರೆ. ಮೌಸ್, ವೈರಸ್, ಶೆಲ್, ಥ್ರೆಡ್, ಬಗ್ - ಹೀಗೆ ಅದೆಷ್ಟೋ ಪರಿಚಿತ ಹೆಸರುಗಳು ನಮಗೆ ಗೊತ್ತಿರುವ ಅರ್ಥಕ್ಕೆ ಕೊಂಚವೂ ಸಂಬಂಧವಿಲ್ಲದ ರೀತಿಯಲ್ಲಿ ಗಣಕಲೋಕದಲ್ಲಿ ಬಳಕೆಯಾಗುತ್ತಿವೆ.

ಮಂಗಳವಾರ, ಮಾರ್ಚ್ 8, 2011

ಕಾಪಿ ಪೇಸ್ಟ್ ಕತೆ

ಟಿ ಜಿ ಶ್ರೀನಿಧಿ

ಇತ್ತೀಚೆಗೆ ಜರ್ಮನಿಯ ಮಂತ್ರಿಯೊಬ್ಬರು ತಮ್ಮ ಸ್ಥಾನಕ್ಕೆ ರಾಜೀನಾಮೆ ಕೊಡಬೇಕಾದ ಪರಿಸ್ಥಿತಿ ಬಂತು. ಆತನ ಮೇಲಿದ್ದದ್ದು ತನ್ನ ಡಾಕ್ಟರೇಟ್ ಪ್ರಬಂಧದಲ್ಲಿ ಕೃತಿಚೌರ್ಯ ಮಾಡಿದ ಆರೋಪ. ಲಿಬಿಯಾದ ಕುಖ್ಯಾತ ಸರ್ವಾಧಿಕಾರಿ ಕರ್ನಲ್ ಗಡಾಫಿಯ ಮಗನ ಮೇಲೂ ಇದೀಗ ಇಂತಹುದೇ ಅರೋಪ ಬಂದಿದೆ. ಆತನಿಗೆ ಡಾಕ್ಟರೇಟ್ ಕೊಟ್ಟಿದ್ದ ಪ್ರತಿಷ್ಠಿತ ಲಂಡನ್ ಸ್ಕೂಲ್ ಆಫ್ ಇಕನಾಮಿಕ್ಸ್ ಈ ಅರೋಪ ಕುರಿತ ತನಿಖೆ ಪ್ರಾರಂಭಿಸಿದೆ.

ಗಣಕ ಜಗತ್ತಿನಲ್ಲಿ ಸರ್ವಾಂತರ್ಯಾಮಿಯಾಗಿರುವ ಕಾಪಿ-ಪೇಸ್ಟ್ ತಂತ್ರ ಎಷ್ಟು ಪ್ರಭಾವಶಾಲಿ ಎನ್ನುವುದಕ್ಕೆ ಇವು ಕೇವಲ ಉದಾಹರಣೆಗಳಷ್ಟೆ.

ಸೋಮವಾರ, ಮಾರ್ಚ್ 7, 2011

ವಿಶ್ವಕನ್ನಡ ಸಮ್ಮೇಳನದಲ್ಲಿ ವಿಜ್ಞಾನ-ತಂತ್ರಜ್ಞಾನ

ಇ-ಜ್ಞಾನ ವಾರ್ತೆ

ಮಾರ್ಚ್ ಹನ್ನೊಂದರಿಂದ ಮೂರು ದಿನಗಳ ಕಾಲ ಬೆಳಗಾವಿಯಲ್ಲಿ ನಡೆಯಲಿರುವ ವಿಶ್ವಕನ್ನಡ ಸಮ್ಮೇಳನದಲ್ಲಿ 'ಜ್ಞಾನ - ವಿಜ್ಞಾನ - ತಂತ್ರಜ್ಞಾನ - ಕರ್ನಾಟಕ' ಎಂಬ ವಿಚಾರಸಂಕಿರಣವನ್ನು ಆಯೋಜಿಸಲಾಗಿದೆ.

ಮಂಗಳವಾರ, ಮಾರ್ಚ್ 1, 2011

ಇದು ಸೋಷಿಯಲ್ ಶಾಪಿಂಗ್

ಟಿ ಜಿ ಶ್ರೀನಿಧಿ

ಸ್ನ್ಯಾಪ್‌ಡೀಲ್, ಕೂವ್ಸ್, ಡೀಲಿವೋರ್, ಡೀಲ್ಸ್ ಆಂಡ್ ಯೂ, ಟ್ಯಾಗಲ್, ಮಸ್ತಿ ಡೀಲ್ಸ್, ಸಿಟಿಆಫರ್ಸ್ - ಇವು ಭಾರತದ ಜಾಲಲೋಕದಲ್ಲಿ ಇತ್ತೀಚೆಗೆ ಕೇಳಿಬರುತ್ತಿರುವ ಹೊಸ ಹೆಸರುಗಳಲ್ಲಿ ಕೆಲವು. "ಇಪ್ಪತ್ತೈದು ರೂಪಾಯಿ ಕೊಡಿ, ಪುಸ್ತಕಗಳ ಖರೀದಿ ಮೇಲೆ ಇನ್ನೂರು ರೂಪಾಯಿ ರಿಯಾಯಿತಿ ಪಡೆಯಿರಿ", "ನಾನ್ನೂರು ರೂಪಾಯಿ ಬೆಲೆಯ ತಿಂಡಿತೀರ್ಥ ಸೇವಿಸಿ, ನೂರಾ ತೊಂಬತ್ತು ರೂಪಾಯಿ ಮಾತ್ರ ಬಿಲ್ ಪಾವತಿಸಿ", "ವೈನಾಡಿನ ಕಾಡಿನಲ್ಲಿರುವ ರೆಸಾರ್ಟಿನಲ್ಲಿ ತಂಗಲು ಅರ್ಧಬೆಲೆ ಮಾತ್ರ ಕೊಟ್ಟರೆ ಸಾಕು" ಎನ್ನುವಂತಹ 'ಡೀಲು'ಗಳನ್ನು ಮಾರುವುದು ಈ ತಾಣಗಳ ಕೆಲಸ. ಆನ್‌ಲೈನ್ ವ್ಯಾಪಾರಕ್ಕೆ ಹೊಸ ಮೆರುಗು ತಂದುಕೊಟ್ಟಿರುವ ಈ ತಾಣಗಳೆಲ್ಲ ಸೋಷಿಯಲ್ ಶಾಪಿಂಗ್‌ನ ಪರಿಕಲ್ಪನೆ ಆಧರಿಸಿ ಕೆಲಸಮಾಡುತ್ತಿವೆ.
badge