ಕೊಳ್ಳೇಗಾಲ ಶರ್ಮ
ಬೆಂಗಳೂರಿನ ಉಸಿರುಗಟ್ಟಿಸುವ ಹೊಗೆಗಾಳಿಯಿಂದ ತಪ್ಪಿಸಿಕೊಂಡು ತುಸು ಆರಾಮ ಪಡೆಯಲು ಪ್ರತಿ ವಾರವೂ ವಾಹನದಲ್ಲಿ ಬೇರಾವುದೋ ಊರಿಗೆ ಓಟಕೀಳುವವರಲ್ಲಿ ನೀವೂ ಒಬ್ಬರಾಗಿದ್ದರೆ ಇದೋ ಇಲ್ಲೊಂದು ಸಮಾಧಾನಕರವಾದ ಸುದ್ದಿ. ನವದೆಹಲಿಯಲ್ಲಿ ಕೆಲವು ವರ್ಷಗಳ ಹಿಂದೆ ಅನುಷ್ಠಾನಕ್ಕೆ ಬಂದ ವಾಯುಮಾಲಿನ್ಯವನ್ನು ನಿಯಂತ್ರಿಸುವ ಕ್ರಮಗಳು ಮಲಿನವಾಗಿರುವ ಗಾಳಿಯ ದುಷ್ಪ್ರಭಾವವನ್ನು ಕಡಿಮೆ ಮಾಡುತ್ತವೆ ಎನ್ನುವ ಸುದ್ದಿಯನ್ನು ಅಟ್ಮಾಸ್ಫೆರಿಕ್ ಎನ್ವಿರಾನ್ಮೆಂಟ್ ಪತ್ರಿಕೆ ಪ್ರಕಟಿಸಿದೆ. ಅಮೆರಿಕೆಯ ಅಯೋವಾ ವಿಶ್ವವಿದ್ಯಾನಿಲಯದ ಭೂಗೋಳವಿಜ್ಞಾನಿ ಭಾರತ ಸಂಜಾತ ನರೇಶ್ ಕುಮಾರ್ ಬ್ರೌನ್ ವಿಶ್ವವಿದ್ಯಾನಿಲಯದ ಅರ್ಥಶಾಸ್ತ್ರಜ್ಞ ಆಂಡ್ರ್ಯೂ ಫಾಸ್ಟರ್ ಜೊತೆಗೂಡಿ ಪ್ರಕಟಿಸಿರುವ ಒಂದು ವಿಶ್ಲೇಷಣಾ ಪ್ರಬಂಧವೊಂದು ಈ ತೀರ್ಮಾನಕ್ಕೆ ಬಂದಿದೆ.
ಬೆಂಗಳೂರಿನ ಉಸಿರುಗಟ್ಟಿಸುವ ಹೊಗೆಗಾಳಿಯಿಂದ ತಪ್ಪಿಸಿಕೊಂಡು ತುಸು ಆರಾಮ ಪಡೆಯಲು ಪ್ರತಿ ವಾರವೂ ವಾಹನದಲ್ಲಿ ಬೇರಾವುದೋ ಊರಿಗೆ ಓಟಕೀಳುವವರಲ್ಲಿ ನೀವೂ ಒಬ್ಬರಾಗಿದ್ದರೆ ಇದೋ ಇಲ್ಲೊಂದು ಸಮಾಧಾನಕರವಾದ ಸುದ್ದಿ. ನವದೆಹಲಿಯಲ್ಲಿ ಕೆಲವು ವರ್ಷಗಳ ಹಿಂದೆ ಅನುಷ್ಠಾನಕ್ಕೆ ಬಂದ ವಾಯುಮಾಲಿನ್ಯವನ್ನು ನಿಯಂತ್ರಿಸುವ ಕ್ರಮಗಳು ಮಲಿನವಾಗಿರುವ ಗಾಳಿಯ ದುಷ್ಪ್ರಭಾವವನ್ನು ಕಡಿಮೆ ಮಾಡುತ್ತವೆ ಎನ್ನುವ ಸುದ್ದಿಯನ್ನು ಅಟ್ಮಾಸ್ಫೆರಿಕ್ ಎನ್ವಿರಾನ್ಮೆಂಟ್ ಪತ್ರಿಕೆ ಪ್ರಕಟಿಸಿದೆ. ಅಮೆರಿಕೆಯ ಅಯೋವಾ ವಿಶ್ವವಿದ್ಯಾನಿಲಯದ ಭೂಗೋಳವಿಜ್ಞಾನಿ ಭಾರತ ಸಂಜಾತ ನರೇಶ್ ಕುಮಾರ್ ಬ್ರೌನ್ ವಿಶ್ವವಿದ್ಯಾನಿಲಯದ ಅರ್ಥಶಾಸ್ತ್ರಜ್ಞ ಆಂಡ್ರ್ಯೂ ಫಾಸ್ಟರ್ ಜೊತೆಗೂಡಿ ಪ್ರಕಟಿಸಿರುವ ಒಂದು ವಿಶ್ಲೇಷಣಾ ಪ್ರಬಂಧವೊಂದು ಈ ತೀರ್ಮಾನಕ್ಕೆ ಬಂದಿದೆ.