ಸೋಮವಾರ, ಜೂನ್ 20, 2011

ಪುಸ್ತಕ ಬಿಡುಗಡೆ - "ಭೂಮಿಗುದುರಿತೆ ಜೀವ?"


ಶ್ರೀ ಕೊಳ್ಳೇಗಾಲ ಶರ್ಮ ಅವರ "ಭೂಮಿಗುದುರಿತೆ ಜೀವ? ಮತ್ತು ಇತರ ಪ್ರಶ್ನೆಗಳು" ಕೃತಿ ಜೂನ್ ೨೫ರಂದು ಸಂಜೆ ಲೋಕಾರ್ಪಣೆಗೊಳ್ಳಲಿದೆ. ಬೆಂಗಳೂರಿನ ಜೆ. ಸಿ. ರಸ್ತೆಯಲ್ಲಿರುವ ಕನ್ನಡ ಭವನದ ನಯನ ಸಭಾಂಗಣದಲ್ಲಿ ನಡೆಯಲಿರುವ ಈ ಕಾರ್ಯಕ್ರಮ ಓದುಗರಿಗೆ ತಮ್ಮ ನೆಚ್ಚಿನ ವಿಜ್ಞಾನ ಬರಹಗಾರರನ್ನೆಲ್ಲ ಒಟ್ಟಿಗೆ ಭೇಟಿಯಾಗುವ ಅವಕಾಶ ಒದಗಿಸಲಿದೆ. ಇದೇ ಸಂದರ್ಭದಲ್ಲಿ ಹಿರಿಯ ವಿಜ್ಞಾನ ಬರಹಗಾರರಾದ ಪ್ರೊ. ಅಡ್ಯನಡ್ಕ ಕೃಷ್ಣಭಟ್, ಪ್ರೊ. ಜೆ. ಆರ್. ಲಕ್ಷ್ಮಣರಾವ್ ಹಾಗೂ ನವಕರ್ನಾಟಕ ಪ್ರಕಾಶನದ ಶ್ರೀ ಆರ್. ಎಸ್. ರಾಜಾರಾಮ್ ಅವರನ್ನು ಪೆನ್ ಸರ್ಕಲ್ ಅಂತರಜಾಲ ಬಳಗದ ವತಿಯಿಂದ ಗೌರವಿಸಲಾಗುವುದು.

ಹೆಚ್ಚಿನ ವಿವರಗಳಿಗಾಗಿ ಆಹ್ವಾನ ಪತ್ರಿಕೆಯ ಮೇಲೆ ಕ್ಲಿಕ್ ಮಾಡಿ.

ಕಾಮೆಂಟ್‌ಗಳಿಲ್ಲ:

badge