ಶುಕ್ರವಾರ, ಸೆಪ್ಟೆಂಬರ್ 30, 2011

ಇಜ್ಞಾನ ವಿಶೇಷ: ಜೀವನಶೈಲಿ ಮತ್ತು ಆರೋಗ್ಯ

ಡಾ. ಪಿ.ಎಸ್. ಶಂಕರ್

ಇಜ್ಞಾನದ ಓದುಗರಿಗಾಗಿ ಈ ವಿಶೇಷ ಲೇಖನ ನೀಡಿರುವ ಡಾ| ಪಿ. ಎಸ್. ಶಂಕರ್ ಹೆಸರಾಂತ ವೈದ್ಯರು ಹಾಗೂ ವೈದ್ಯಕೀಯ ಲೇಖಕರು. ಗುಲಬರ್ಗಾದ ಎಂ ಆರ್ ವೈದ್ಯಕೀಯ ಮಹಾವಿದ್ಯಾಲಯದ ನಿರ್ದೇಶಕರಾಗಿ ಸೇವೆಸಲ್ಲಿಸುತ್ತಿರುವ ಶ್ರೀಯುತರು ಕರ್ನಾಟಕ ವಿಜ್ಞಾನ ಮತ್ತು ತಂತ್ರಜ್ಞಾನ ಅಕಾಡೆಮಿ ಸದಸ್ಯರು ಹಾಗೂ 'ವಿಜ್ಞಾನ ಲೋಕ' ಪತ್ರಿಕೆಯ ಸಂಪಾದಕರೂ ಹೌದು.

ಆರೋಗ್ಯ ಪ್ರತಿಯೊಬ್ಬ ವ್ಯಕ್ತಿಯ ದೈಹಿಕ, ಮಾನಸಿಕ, ಸಾಮಾಜಿಕ ಬೌದ್ಧಿಕ ಮತ್ತು ಆಧ್ಯಾತ್ಮಿಕ ಸುಸ್ಥಿತಿಯಾಗಿದೆ. ಆರೋಗ್ಯ ನಮ್ಮ ಎಲ್ಲ ಸಾಮಾಜಿಕ ಗುಣಧರ್ಮಗಳಿಗೆ ಮತ್ತು ಜೀವನದ ಸುಖ-ಸಂತೋಷಕ್ಕೆ ಬುನಾದಿಯಾಗಿದೆ. ಆರೋಗ್ಯ ಕೇವಲ ನಿರೋಗಿಯಾಗಿರುವುದಾಗಲೀ ಇಲ್ಲವೆ ದೌರ್ಬಲ್ಯವನ್ನು ಹೊಂದಿರುವುದಿಲ್ಲವಾಗಲೀ ಅಲ್ಲ.

ಆರೋಗ್ಯ - ಅನಾರೋಗ್ಯ, ರೋಗ-ನಿರೋಗ ಒಟ್ಟಿಗೆ ಸಾಗುವ ಸ್ಥಿತಿಗಳು. ಅವುಗಳನ್ನು ಬೇರ್ಪಡಿಸುವ ತಾಣವಾವುದೂ ಇಲ್ಲ. ನಾವು ಸದಾ ಆರೋಗ್ಯ - ಅನಾರೋಗ್ಯದ ನಡುವೆ ಬದುಕು ನಡೆಸುತ್ತಿದ್ದೇವೆ. ಈ ಸ್ಥಿತಿಗಳನ್ನು ತೋರಿಸುವ ರೇಖೆಯಲ್ಲಿ ಅತ್ಯಂತ ಕೆಳಗೆ ಗೋಚರಿಸುವುದು ಸಾವು ಮತ್ತು ಆ ರೇಖೆಯಲ್ಲಿ ಅತ್ಯಂತ ಉನ್ನತ ಸ್ಥಾನದಲ್ಲಿರುವುದು ಆರೋಗ್ಯ. ಹೀಗೆ ಅರೋಗ ಅಲೆಯಂತೆ ಆ ರೇಖೆಯ ಮೇಲೆ ಕೆಳಗೆ ಸಾಗುತ್ತಿದ್ದು ಅವುಗಳ ಬೇರೆ ಬೇರೆ ಮಟ್ಟ ವ್ಯಕ್ತಿಯ ಆರೋಗ್ಯ ಸ್ಥಿತಿಯಲ್ಲಿ ತೋರಿಬರುತ್ತಿರುವ ಬದಲಾವಣೆಗಳನ್ನು ಪ್ರತಿಫಲಿಸುತ್ತದೆ. ವ್ಯಕ್ತಿ ನಿರೋಗವನ್ನು ಆಯ್ದುಕೊಳ್ಳಬೇಕೇ ವಿನಃ ರೋಗವನ್ನಲ್ಲ.

ಹೀಗಾಗಿ ಆರೋಗ್ಯವೆಂಬುದು ಸ್ಥಾಯಿಯಲ್ಲ. ಅದು ನಿರಂತರವಾಗಿ ಬದಲುಗೊಳ್ಳುತ್ತರುವ ಸ್ಥಿತಿ ಇಂದು ತೋರಿಬರುವ ಆರೋಗ್ಯ ನಾಳೆ ಇರಲಿಕ್ಕಿಲ್ಲ. ನಾಡಿದ್ದು ಅದು ಮತ್ತೆ ಬದಲಾವಣೆಯನ್ನು ತೋರಿಸಬಹುದು. ನಾವು ಬದುಕಿರುವಷ್ಟು ಕಾಲ ಆರೋಗ್ಯದಿಂದ ಬದುಕಿರಬೇಕಾಗಿದೆ.

ಮಂಗಳವಾರ, ಸೆಪ್ಟೆಂಬರ್ 27, 2011

ಕಿರಿಯರ ಸಮಾಜಜಾಲಗಳು

ಟಿ. ಜಿ. ಶ್ರೀನಿಧಿ

ತಂತ್ರಜ್ಞಾನ ಎಂದತಕ್ಷಣ ಅದನ್ನು ಯುವಜನತೆಗೆ ಸಂಬಂಧಪಟ್ಟ ವಿಷಯ ಎನ್ನುವಂತೆ ನೋಡುವ ಪರಿಪಾಠವೇ ಜಾಸ್ತಿ. ಜಾಲಲೋಕದ ವಿಷಯ ಬಂದಾಗಲಂತೂ ಈ ಅಭಿಪ್ರಾಯ ಇನ್ನೂ ವ್ಯಾಪಕವಾಗಿದೆ. ಸೋಶಿಯಲ್ ನೆಟ್‌ವರ್ಕ್ ಅಥವಾ ಸಮಾಜ ಜಾಲಗಳನ್ನೇ ತೆಗೆದುಕೊಳ್ಳಿ; ಇದೆಲ್ಲ ನೀವು ಯುವಕರು ಬಳಸಿಕೊಳ್ರಪ್ಪ, ನಮಗೆ ಇದೊಂದೂ ಅರ್ಥವಾಗಲ್ಲ ಎನ್ನುವ ಅನೇಕ ಜನ ಕಾಣಸಿಗುತ್ತಾರೆ.

ಆದರೆ ಈಚಿನ ವರ್ಷಗಳಲ್ಲಿ ಸಮಾಜ ಜಾಲಗಳ ಜನಪ್ರಿಯತೆ ಅದೆಷ್ಟರ ಮಟ್ಟಿಗೆ ಹೆಚ್ಚಿದೆ ಎಂದರೆ ಚಿಕ್ಕ ಮಕ್ಕಳಿಂದ ಹಿಡಿದು ಅವರ ಅಜ್ಜ-ಅಜ್ಜಿಯರವರೆಗೆ ಎಲ್ಲ ವಯಸ್ಸಿನವರೂ ಸಮಾಜ ಜಾಲಗಳಲ್ಲಿ ಕಾಣಸಿಗುತ್ತಿದ್ದಾರೆ.

ಅಜ್ಜ-ಅಜ್ಜಿಯರು ವಿಶ್ವವ್ಯಾಪಿ ಜಾಲದತ್ತ ಮುಖಮಾಡಿದರೆ ಒಳ್ಳೆಯದೇ ಆಯಿತು ಬಿಡಿ; ಆದರೆ ಚಿಕ್ಕ ಮಕ್ಕಳೂ ಟ್ವೀಟರ್, ಫೇಸ್‌ಬುಕ್, ಮೈಸ್ಪೇಸ್ ಇತ್ಯಾದಿಗಳಲ್ಲಿ ಕಾಣಿಸಿಕೊಳ್ಳುತ್ತಿದ್ದಾರಲ್ಲ!

ಮಂಗಳವಾರ, ಸೆಪ್ಟೆಂಬರ್ 20, 2011

ಇದು ಕ್ಯೂಆರ್ ಕೋಡ್

ಟಿ. ಜಿ. ಶ್ರೀನಿಧಿ

ಈಚೆಗೆ ಅನೇಕ ಜಾಹೀರಾತುಗಳಲ್ಲಿ, ಜಾಲತಾಣಗಳಲ್ಲಿ ಚಿತ್ರವಿಚಿತ್ರ ವಿನ್ಯಾಸದ ಕಪ್ಪನೆಯ ಚೌಕಗಳು ಕಾಣಿಸಿಕೊಳ್ಳುತ್ತಿರುವುದನ್ನು ನೀವು ಗಮನಿಸಿರಬಹುದು; ಇಂತಹ ಚೌಕಗಳ ಪಕ್ಕದಲ್ಲೇ ಪ್ರಕಟವಾಗುವ "ಈ ಕ್ಯೂಆರ್ ಸಂಕೇತವನ್ನು ಸ್ಕ್ಯಾನ್ ಮಾಡಿ" ಎಂಬ ಸಂದೇಶವನ್ನೂ ನೋಡಿರಬಹುದು. ಇದೆಂತಹ ಸಂಕೇತ? ಇದನ್ನು ಸ್ಕ್ಯಾನ್ ಮಾಡುವುದು ಹೇಗೆ? ಸ್ಕ್ಯಾನ್ ಮಾಡಿದಾಗ ಏನಾಗುತ್ತದೆ? - ಇಂತಹ ಅನೇಕ ಪ್ರಶ್ನೆಗಳೂ ನಿಮ್ಮ ಮನಸ್ಸಿಗೆ ಬಂದಿರಬಹುದು.

ಹೌದು, ಈ ಕ್ಯೂಆರ್ ಕೋಡ್ ಅಂದರೇನು? ನೋಡೋಣ ಬನ್ನಿ.

ಮಂಗಳವಾರ, ಸೆಪ್ಟೆಂಬರ್ 13, 2011

ಹಳೆಯ ಗಣಕದ ಹಳತಾಗದ ನೆನಪು

ಟಿ. ಜಿ. ಶ್ರೀನಿಧಿ

'ಫೋರ್ಡ್ ಮಾಡೆಲ್ ಟಿ' ಹೆಸರು ಕೇಳಿದ್ದೀರಾ? ಆಟೊಮೊಬೈಲ್ ಕ್ಷೇತ್ರದ ಚಿತ್ರಣವನ್ನು ಸಂಪೂರ್ಣವಾಗಿ ಬದಲಿಸಿದ ಕಾರು ಅದು. "ಕಾರುಗಳೆಂದರೆ ಐಷಾರಾಮಿ ವಸ್ತುಗಳು, ಅವು ಏನಿದ್ದರೂ ಶ್ರೀಮಂತರಿಗೆ ಮಾತ್ರ ಮೀಸಲು" ಎನ್ನುವ ಪರಿಸ್ಥಿತಿಯಿದ್ದ ಕಾಲದಲ್ಲಿ 'ಫೋರ್ಡ್ ಮಾಡೆಲ್ ಟಿ' ಕಾರು ಜನಸಾಮಾನ್ಯರಿಗೂ ಎಟುಕುವ ಬೆಲೆಯಲ್ಲಿ ಮಾರುಕಟ್ಟೆಗೆ ಬಂತು. ಕಾರುಗಳನ್ನು ಮಧ್ಯಮವರ್ಗದ ಜನತೆಯ ನಿಲುಕಿಗೂ ತಂದದ್ದು ಈ ಕಾರಿನ ಸಾಧನೆ.

ಹೀಗೆ ಯಾವುದೇ ಕ್ಷೇತ್ರ ತೆಗೆದುಕೊಂಡರೂ ಅದರಲ್ಲಿ ಕ್ರಾಂತಿಕಾರಕ ಬದಲಾವಣೆಗಳನ್ನು ತಂದ ಕೆಲ ಘಟನೆಗಳು ಇತಿಹಾಸದಲ್ಲಿ ಕಾಣಸಿಗುತ್ತವೆ.

ವೈಯಕ್ತಿಕ ಗಣಕಗಳನ್ನು (ಪರ್ಸನಲ್ ಕಂಪ್ಯೂಟರ್; ಪಿಸಿ) ಸಾಮಾನ್ಯ ಜನರಿಗೂ ಎಟುಕುವಂತೆ ಮಾಡಿದ ಕಮಡೋರ್ ೬೪ ಗಣಕಗಳ ಸೃಷ್ಟಿಯನ್ನು ಇಂತಹ ಘಟನೆಗಳ ಸಾಲಿಗೆ ಧಾರಾಳವಾಗಿ ಸೇರಿಸಬಹುದು.

ಮಂಗಳವಾರ, ಸೆಪ್ಟೆಂಬರ್ 6, 2011

ಬ್ರಾಡ್‌ಬ್ಯಾಂಡ್ ಭಾಷೆ

ಟಿ. ಜಿ. ಶ್ರೀನಿಧಿ

ಅಂತರಜಾಲ ಸಂಪರ್ಕ ಬಂದ ಹೊಸತು. ವಿಶ್ವವ್ಯಾಪಿ ಜಾಲದಲ್ಲಿ ವಿಹರಿಸಬೇಕೆಂದರೆ ಆಗ ಲಭ್ಯವಿದ್ದದ್ದು ಡಯಲ್ ಅಪ್ ಸಂಪರ್ಕ ಮಾತ್ರ. ದೂರವಾಣಿ ಬಳಸಿ ಕೆಲಸಮಾಡುತ್ತಿದ್ದ ಆ ಬಗೆಯ ಸಂಪರ್ಕ ಬಳಸುವವರಿಗೆ ಅಪಾರ ತಾಳ್ಮೆಯಿರಬೇಕಿದ್ದು ಅನಿವಾರ್ಯವಾಗಿತ್ತು. ಯಾವುದೋ ಜಾಲತಾಣ ನೋಡಬೇಕೆಂದು ಹೊರಟರೆ ಪುಟಗಳು ತೀರಾ ನಿಧಾನವಾಗಿ ತೆರೆದುಕೊಳ್ಳುತ್ತಿದ್ದವು. ಇನ್ನು ಯಾವುದಾದರೂ ಕಡತವನ್ನು ಡೌನ್‌ಲೋಡ್ ಅಥವಾ ಅಪ್‌ಲೋಡ್ ಮಾಡಬೇಕಾದರಂತೂ ಅದರ ಆಮೆವೇಗ ಬೇಸರಬರಿಸಿಬಿಡುತ್ತಿತ್ತು. ಅಂತರಜಾಲ ಸಂಪರ್ಕದಲ್ಲಿರುವಾಗ ಯಾರಿಗಾದರೂ ಕರೆಮಾಡಬೇಕೆಂದರೆ ಅದೂ ಸಾಧ್ಯವಾಗುತ್ತಿರಲಿಲ್ಲ.

ಈ ಅನುಭವವನ್ನು ಥಟ್ ಅಂತ ಬದಲಿಸಿ ವಿಶ್ವವ್ಯಾಪಿ ಜಾಲದ ಜೊತೆಗಿನ ನಮ್ಮ ಅನುಭವದಲ್ಲಿ ಕ್ರಾಂತಿಕಾರಕ ಬದಲಾವಣೆ ತಂದದ್ದು ಬ್ರಾಡ್‌ಬ್ಯಾಂಡ್ ಸಂಪರ್ಕ.
badge