ಇಜ್ಞಾನ ವಾರ್ತೆ
ಕರ್ನಾಟಕ ವಿಜ್ಞಾನ ಮತ್ತು ತಂತ್ರಜ್ಞಾನ ಅಕಾಡೆಮಿಯ ಐದನೇ ವಾರ್ಷಿಕ ಸಮ್ಮೇಳನ ಬೆಂಗಳೂರಿನ ದಯಾನಂದ ಸಾಗರ್ ವಿದ್ಯಾಸಂಸ್ಥೆಯಲ್ಲಿ ಇಂದು ಬೆಳಿಗ್ಗೆ ಉದ್ಘಾಟನೆಯಾಯಿತು. ಬುಧವಾರ (ಡಿಸೆಂಬರ್ ೧೯, ೨೦೧೨) ಹಾಗೂ ಗುರುವಾರ (ಡಿಸೆಂಬರ್ ೨೦, ೨೦೧೨) ನಡೆಯಲಿರುವ ಈ ಸಮ್ಮೇಳನದಲ್ಲಿ ಅನೇಕ ವಿಷಯತಜ್ಞರು ತಮ್ಮ ಪ್ರಬಂಧಗಳನ್ನು ಮಂಡಿಸಲಿದ್ದಾರೆ.
ಹಿರಿಯ ವೈದ್ಯರೂ ಜನಪ್ರಿಯ ವಿಜ್ಞಾನ ಸಂವಹನಕಾರರೂ ಆದ ಡಾ. ಪಿ. ಎಸ್. ಶಂಕರ್ ಅವರನ್ನು ಅವರ ಜೀವಮಾನದ ಸಾಧನೆಗಾಗಿ ಉದ್ಘಾಟನಾ ಸಮಾರಂಭದಲ್ಲಿ ಗೌರವಿಸಲಾಯಿತು. ಈ ಗೌರವ ಪಡೆದಿರುವ ಡಾ. ಶಂಕರ್ ಅವರನ್ನು ಇಜ್ಞಾನ ಬಳಗ ಹೃತ್ಪೂರ್ವಕವಾಗಿ ಅಭಿನಂದಿಸುತ್ತದೆ.
ಕರ್ನಾಟಕ ವಿಜ್ಞಾನ ಮತ್ತು ತಂತ್ರಜ್ಞಾನ ಅಕಾಡೆಮಿಯ ಪತ್ರಿಕೆ 'ವಿಜ್ಞಾನ ಲೋಕ'ದ ಸಂಚಿಕೆಗಳಿಂದ ಆಯ್ದ ಪ್ರಾತಿನಿಧಿಕ ಬರೆಹಗಳ ಸಂಕಲನ 'ವಿಜ್ಞಾನ ದೀಪ್ತಿ'ಯನ್ನು ಉದ್ಘಾಟನಾ ಸಮಾರಂಭದಲ್ಲಿ ಲೋಕಾರ್ಪಣೆಗೊಳಿಸಲಾಯಿತು. ಸದ್ಯಕ್ಕೆ ಮೂರು ತಿಂಗಳಿಗೊಮ್ಮೆ ಪ್ರಕಟವಾಗುತ್ತಿರುವ 'ವಿಜ್ಞಾನ ಲೋಕ'ವನ್ನು ಪ್ರತಿ ತಿಂಗಳಿಗೊಮ್ಮೆ ಏಕೆ ಪ್ರಕಟಿಸಬಾರದು ಎಂಬ ಪ್ರಶ್ನೆ ಎದ್ದಿದ್ದು, ಹಾಗೂ ಆ ನಿಟ್ಟಿನಲ್ಲಿ ಬೇಕಾದ ನೆರವನ್ನು ಒದಗಿಸಿಕೊಡುವ ಆಶ್ವಾಸನೆ ಸ್ವತಃ ಮುಖ್ಯಮಂತ್ರಿಗಳಿಂದಲೇ ದೊರೆತದ್ದು ಇಂದಿನ ಕಾರ್ಯಕ್ರಮದ ವಿಶೇಷ.
ಕಾಮೆಂಟ್ಗಳಿಲ್ಲ:
ಕಾಮೆಂಟ್ ಪೋಸ್ಟ್ ಮಾಡಿ