ಸೋಮವಾರ, ಜೂನ್ 16, 2014

ವಿಜ್ಞಾನ ಮತ್ತು ತಂತ್ರಜ್ಞಾನ ಪ್ರಶಸ್ತಿ ಪ್ರದಾನ ಸಮಾರಂಭ

ಇಜ್ಞಾನ ವಾರ್ತೆ

ಡಾ. ಪಿ. ಎಸ್. ಶಂಕರ್
ಇಂದು (ಜೂನ್ ೧೬) ಬೆಂಗಳೂರಿನ ಭಾರತೀಯ ವಿಜ್ಞಾನ ಮಂದಿರದಲ್ಲಿ ನಡೆಯಲಿರುವ ಸಮಾರಂಭದಲ್ಲಿ ಕರ್ನಾಟಕ ರಾಜ್ಯ ವಿಜ್ಞಾನ ಮತ್ತು ತಂತ್ರವಿದ್ಯಾ ಮಂಡಳಿಯ ವಾರ್ಷಿಕ ಪ್ರಶಸ್ತಿಗಳನ್ನು ಪ್ರದಾನಮಾಡಲಾಗುವುದು. ವಿಜ್ಞಾನ ಮತ್ತು ತಂತ್ರಜ್ಞಾನ ದಾರ್ಶನಿಕ ಸಮೂಹದ ಕಳೆದೆರಡು ಸಾಲಿನ ಪ್ರಶಸ್ತಿಗಳನ್ನೂ ಇದೇ ಸಂದರ್ಭದಲ್ಲಿ ನೀಡಲಾಗುತ್ತಿದೆ.

ಕರ್ನಾಟಕ ರಾಜ್ಯ ವಿಜ್ಞಾನ ಮತ್ತು ತಂತ್ರವಿದ್ಯಾ ಮಂಡಳಿ ನೀಡುವ ಸರ್. ಎಂ. ವಿಶ್ವೇಶ್ವರಯ್ಯ ಪ್ರಶಸ್ತಿಗೆ ಹಿರಿಯ ವೈದ್ಯವಿಜ್ಞಾನಿ, ವಿಜ್ಞಾನ ಸಂವಹನಕಾರ ಡಾ. ಪಿ. ಎಸ್. ಶಂಕರ್ ಹಾಗೂ ಡಾ. ರಾಜಾರಾಮಣ್ಣ ಪ್ರಶಸ್ತಿಗೆ ಪ್ರೊ. ಕೆ. ಚಿದಾನಂದಗೌಡ ಭಾಜನರಾಗಿದ್ದಾರೆ. ಅವರಿಗೆ ಹಾಗೂ ಇಂದು ಪ್ರಶಸ್ತಿ ಸ್ವೀಕರಿಸುತ್ತಿರುವ ಇತರ ಎಲ್ಲರಿಗೂ ಇಜ್ಞಾನ ಡಾಟ್ ಕಾಮ್ ಪರವಾಗಿ ಹೃತ್ಪೂರ್ವಕ ಅಭಿನಂದನೆಗಳು.

ಕಾಮೆಂಟ್‌ಗಳಿಲ್ಲ:

badge