ತಂತ್ರಜ್ಞಾನ ಕ್ಷೇತ್ರದ ಹೊಸ ಮಾಹಿತಿಯನ್ನು ಕನ್ನಡದ ಲೋಕಕ್ಕೆ ಪರಿಚಯಿಸುತ್ತಿರುವವರಲ್ಲಿ ಶ್ರೀ ಉದಯಶಂಕರ ಪುರಾಣಿಕರದು ಪ್ರಮುಖ ಹೆಸರು. ವಿಜಯ ಕರ್ನಾಟಕ, ಸಂಯುಕ್ತ ಕರ್ನಾಟಕ, ಕನ್ನಡಮ್ಮ ಸೇರಿದಂತೆ ಹಲವು ಪತ್ರಿಕೆಗಳಲ್ಲಿ ಅವರ ಅಂಕಣಗಳು ಬೆಳಕು ಕಂಡಿವೆ. ಮಾಹಿತಿ ತಂತ್ರಜ್ಞಾನ ಕುರಿತ ಅವರ ಹಲವಾರು ಬರಹಗಳು ಅನೇಕ ಸಂಕಲನಗಳಲ್ಲಿ, ವಿಶ್ವಕೋಶಗಳಲ್ಲಿಯೂ ಪ್ರಕಟವಾಗಿವೆ. ಇಜ್ಞಾನ ಡಾಟ್ ಕಾಮ್ ಸಂಪಾದಕ ಟಿ. ಜಿ. ಶ್ರೀನಿಧಿ ಜೊತೆಗೆ ಅವರು ತಮ್ಮ ವಿಚಾರಗಳನ್ನು ಹಂಚಿಕೊಂಡಿದ್ದು ಹೀಗೆ..ವಿಜ್ಞಾನ-ತಂತ್ರಜ್ಞಾನ ಸಂವಹನ ಕ್ಷೇತ್ರಕ್ಕೆ ನೀವು ಬರಲು ಕಾರಣವಾದ ಅಂಶಗಳೇನು?
ವಿಜ್ಞಾನ-ತಂತ್ರಜ್ಞಾನ ಕ್ಷೇತ್ರದಲ್ಲಿ ಗಳಿಸಿರುವ ಇಪ್ಪತ್ತನಾಲ್ಕು ವರ್ಷಗಳ ಅನುಭವ, ಹೆಸರಾಂತ ಸಂಸ್ಥೆಗಳು ಮತ್ತು ತಂತ್ರಜ್ಞರ ಜೊತೆ ಕೆಲಸ ಮಾಡಿ ಪಡೆದಿರುವ ಪರಿಣಿತಿಯನ್ನು ಜನಸಾಮಾನ್ಯರೊಂದಿಗೆ ಹಂಚಿಕೊಳ್ಳಲು ಮತ್ತು ವೈಜ್ಞಾನಿಕ ಮನೋಭಾವ ಬೆಳೆಸಲು, ಸಂವಹನ ಮಾಧ್ಯಮವನ್ನು ಆರಿಸಿಕೊಂಡಿದ್ದೇನೆ.
ನೀವು ಮೆಚ್ಚುವ / ನಿಮ್ಮ ಮೇಲೆ ಪ್ರಭಾವ ಬೀರಿದ ಇತರ ವಿಜ್ಞಾನ ಸಂವಹನಕಾರರು ಯಾರು?
ಕಾರ್ಲ್ ಸಗಾನ್ರವರು ಪುಸ್ತಕ, ಲೇಖನಗಳ ಜೊತೆಯಲ್ಲಿ ಟಿವಿ ಮಾಧ್ಯಮವನ್ನು ಪರಿಣಾಮಕಾರಿಯಾಗಿ ಬಳಸಿದವರು.