ಡಾ. ಶರಣಬಸವೇಶ್ವರ ಅಂಗಡಿ
ಗೆಳೆಯ ಗೋವಿಂದ ಒಮ್ಮೆ ತಮಾಷೆಗೆ 'ಗೋಧಿ ಅದೇ ವ್ಹೀಟ್ನಲ್ಲಿ ಹೀಟ್ ಇದೆ, ರೈಸ್ನಲ್ಲಿ ಐಸ್ ಇದೆ, ಅದಕ್ಕೇ ಚಪಾತಿ ತಿಂದರೆ ಉಷ್ಣ, ಅನ್ನವುಂಡರೆ ತಂಪು' ಅಂದಿದ್ದ. ಮೊನ್ನೆ, ತಮ್ಮನ್ನು ಯೋಗಗುರು ಎಂದು ಕರೆದುಕೊಳ್ಳುವ ಅನಂತ್ಜಿ ಎನ್ನುವ ವ್ಯಕ್ತಿ ಗೋಧಿಯನ್ನು ನಿಂದಿಸುವುದಲ್ಲದೇ, ಅಕ್ಕಿಯನ್ನು ಅನಿಷ್ಟವೆಂದದ್ದು, ದೇಶದ ಕೃಷಿಯನ್ನು, ಹಸಿರು ಕ್ರಾಂತಿಯನ್ನು ನಿರಾಧಾರವಾಗಿ, ಅವೈಜ್ಞಾನಿಕವಾಗಿ ಹಿಗ್ಗಾಮುಗ್ಗಾ ಟೀಕಿಸಿದ್ದನ್ನು ಕೇಳಿದಾಗ ಗೋವಿಂದನ ಹಳೆಯ ಜೋಕ್ ನೆನಪಾಯ್ತು. ಹಿಂದೊಮ್ಮೆ ಇದೇ ಅನಂತ್ಜಿ ಗೋಧಿಯನ್ನು ದುಷ್ಟ ಧಾನ್ಯವೆಂದಿದ್ದು ಸುದ್ದಿಯಾಗಿತ್ತು. ಅದಕ್ಕೆ(ಅವರೇ ಹೇಳಿದ್ದು) ಬಂದ ಸಾವಿರಾರು ಫೋನ್ ಕರೆಗಳಿಗೆ, ಮತ್ತು ಮಿಸ್ಡ್ಕಾಲ್ಗಳಿಗೆ ಪ್ರತಿಕ್ರಿಯೆಯಾಗಿ ಸುಮಾರು ಅರ್ಧಗಂಟೆಯ ಒಂದು ಆಡಿಯೋ ಕ್ಲಿಪ್ ತೇಲಿಬಿಟ್ಟಿದ್ದಾರೆ. ಅದನ್ನು ವಾಟ್ಸಾಪ್ನಲ್ಲಿ ಕೇಳುವ ಅವಕಾಶ ನನಗೂ ಸಿಕ್ಕಿತು. ಅವರ ಆ 'ಜ್ಞಾನ'ದಲ್ಲಿ ಹೇರಳ ತಪ್ಪುಗಳಿವೆ. ಅದು ಜನಸಾಮಾನ್ಯರಿಗೆ ತಿಳಿದಿರಲಿ ಎಂದು ಈ ಲೇಖನದ ಉದ್ದೇಶ.
ಗೆಳೆಯ ಗೋವಿಂದ ಒಮ್ಮೆ ತಮಾಷೆಗೆ 'ಗೋಧಿ ಅದೇ ವ್ಹೀಟ್ನಲ್ಲಿ ಹೀಟ್ ಇದೆ, ರೈಸ್ನಲ್ಲಿ ಐಸ್ ಇದೆ, ಅದಕ್ಕೇ ಚಪಾತಿ ತಿಂದರೆ ಉಷ್ಣ, ಅನ್ನವುಂಡರೆ ತಂಪು' ಅಂದಿದ್ದ. ಮೊನ್ನೆ, ತಮ್ಮನ್ನು ಯೋಗಗುರು ಎಂದು ಕರೆದುಕೊಳ್ಳುವ ಅನಂತ್ಜಿ ಎನ್ನುವ ವ್ಯಕ್ತಿ ಗೋಧಿಯನ್ನು ನಿಂದಿಸುವುದಲ್ಲದೇ, ಅಕ್ಕಿಯನ್ನು ಅನಿಷ್ಟವೆಂದದ್ದು, ದೇಶದ ಕೃಷಿಯನ್ನು, ಹಸಿರು ಕ್ರಾಂತಿಯನ್ನು ನಿರಾಧಾರವಾಗಿ, ಅವೈಜ್ಞಾನಿಕವಾಗಿ ಹಿಗ್ಗಾಮುಗ್ಗಾ ಟೀಕಿಸಿದ್ದನ್ನು ಕೇಳಿದಾಗ ಗೋವಿಂದನ ಹಳೆಯ ಜೋಕ್ ನೆನಪಾಯ್ತು. ಹಿಂದೊಮ್ಮೆ ಇದೇ ಅನಂತ್ಜಿ ಗೋಧಿಯನ್ನು ದುಷ್ಟ ಧಾನ್ಯವೆಂದಿದ್ದು ಸುದ್ದಿಯಾಗಿತ್ತು. ಅದಕ್ಕೆ(ಅವರೇ ಹೇಳಿದ್ದು) ಬಂದ ಸಾವಿರಾರು ಫೋನ್ ಕರೆಗಳಿಗೆ, ಮತ್ತು ಮಿಸ್ಡ್ಕಾಲ್ಗಳಿಗೆ ಪ್ರತಿಕ್ರಿಯೆಯಾಗಿ ಸುಮಾರು ಅರ್ಧಗಂಟೆಯ ಒಂದು ಆಡಿಯೋ ಕ್ಲಿಪ್ ತೇಲಿಬಿಟ್ಟಿದ್ದಾರೆ. ಅದನ್ನು ವಾಟ್ಸಾಪ್ನಲ್ಲಿ ಕೇಳುವ ಅವಕಾಶ ನನಗೂ ಸಿಕ್ಕಿತು. ಅವರ ಆ 'ಜ್ಞಾನ'ದಲ್ಲಿ ಹೇರಳ ತಪ್ಪುಗಳಿವೆ. ಅದು ಜನಸಾಮಾನ್ಯರಿಗೆ ತಿಳಿದಿರಲಿ ಎಂದು ಈ ಲೇಖನದ ಉದ್ದೇಶ.