ಸೋಮವಾರ, ಜುಲೈ 31, 2017

ಕನ್ನಡ ತಂತ್ರಾಂಶ ಲೋಕಕ್ಕೆ ಎರಡು ಹೊಸ ಸೇರ್ಪಡೆ

ಇಜ್ಞಾನ ವಾರ್ತೆ

ಸದಾಕಾಲವೂ ಬದಲಾಗುತ್ತಲೇ ಇರುವುದು ತಂತ್ರಜ್ಞಾನ ಜಗತ್ತಿನ ಹೆಗ್ಗಳಿಕೆ. ಈ ಮೂಲಕ ಸೃಷ್ಟಿಯಾಗುವ ಹೊಸಹೊಸ ಸೌಲಭ್ಯಗಳು ಎಲ್ಲ ಭಾಷೆಗಳ ಬಳಕೆದಾರರನ್ನೂ ತಲುಪುತ್ತವೆ. ಇದಕ್ಕೆ ನಮ್ಮ ಕನ್ನಡವೂ ಹೊರತಲ್ಲ. ಈಚೆಗೆ ಕನ್ನಡಕ್ಕೆ ಲಭ್ಯವಾಗಿರುವ ಇಂತಹ ಎರಡು ಹೊಸ ತಂತ್ರಾಂಶ ಸವಲತ್ತುಗಳ ಸಂಕ್ಷಿಪ್ತ ಪರಿಚಯ ಇಲ್ಲಿದೆ.

ದಾರಿ ತೋರುವ 'ವೇಜ಼್'

ನಮ್ಮ ಸುತ್ತಮುತ್ತಲ ಪ್ರದೇಶದ ಭೂಪಟವನ್ನೂ ಅದರಲ್ಲಿ ನಮ್ಮ ಓಡಾಟದ ದಾರಿಯನ್ನೂ ತೋರಿಸುವ ಸೌಲಭ್ಯವನ್ನು ನಾವು ಅನೇಕ ಆಪ್‌ಗಳಲ್ಲಿ, ಜಾಲತಾಣಗಳಲ್ಲಿ ಬಳಸುತ್ತೇವೆ. ವಾಹನ ಚಲಾಯಿಸಲು ನೆರವಾಗುವ ಗೂಗಲ್ ಮ್ಯಾಪ್ಸ್‌ನಂತಹ ತಂತ್ರಾಂಶಗಳಲ್ಲಂತೂ ಧ್ವನಿರೂಪದ ಮಾರ್ಗದರ್ಶನವೂ ಸಿಗುತ್ತವೆ.

ಈವರೆಗೆ ಇಂಗ್ಲಿಷಿನಲ್ಲಷ್ಟೇ ಇದ್ದ ಈ ಸೌಲಭ್ಯ ಇದೀಗ ಕನ್ನಡದಲ್ಲೂ ಸಿಗುತ್ತಿದೆ.

ಗುರುವಾರ, ಜುಲೈ 27, 2017

ವಿಜ್ಞಾನದ ಇಜ್ಞಾನ: ಹೀಗೊಂದು ಅವಲಂಬನೆಯ ಕತೆ

ಕ್ಷಮಾ ವಿ. ಭಾನುಪ್ರಕಾಶ್


ಇಂದು ಇಡೀ ವಿಶ್ವವೇ ಒಂದು ಪುಟ್ಟ ಊರಿದ್ದಂತೆ. ಆದರೆ ಜಗತ್ತಿನ ಯಾವುದೋ ಮೂಲೆಯಲ್ಲಿರುವವರೊಡನೆ ಕ್ಷಣಮಾತ್ರದಲ್ಲೇ ಸಂಪರ್ಕ ಸಾಧಿಸಲು ಗೊತ್ತಿರುವ ನಮಗೆ ಪಕ್ಕದ ಮನೆಯಲ್ಲಿರುವವರ ಪರಿಚಯವೇ ಇರುವುದಿಲ್ಲ. ಪಠ್ಯಪುಸ್ತಕಗಳಲ್ಲಿ ಓದಿದ "ಮಾನವ ಸಂಘಜೀವಿ" ಎನ್ನುವ ಹೇಳಿಕೆ ನಿಜವೇ ಎಂದು ನಮ್ಮನ್ನು ನಾವೇ ಕೇಳಿಕೊಳ್ಳಬೇಕಾಗಿರುವ ಪರಿಸ್ಥಿತಿ ಇಂದಿನದು. 

ಹೀಗೆ ಸಹಜೀವನದ ಪರಿಕಲ್ಪನೆ ಮನುಷ್ಯರ ಜೀವನದಲ್ಲಿ ಮೌಲ್ಯ ಕಳೆದುಕೊಳ್ಳುತ್ತಿರಬಹುದು, ಆದರೆ ಪ್ರಾಣಿ ಪಕ್ಷಿ ಕೀಟ ಮತ್ತು ಸೂಕ್ಷ್ಮಾಣು ಜೀವಿಗಳ ಪ್ರಪಂಚದಲ್ಲಿ ಹಾಗೇನೂ ಆಗಿಲ್ಲ. ಅಲ್ಲಿನ ಸಸ್ಯಗಳ ನಡುವೆ, ಪ್ರಾಣಿಗಳ ನಡುವೆ, ಕೀಟಗಳ ನಡುವೆ ಅಥವಾ ಪ್ರಾಣಿ - ಸಸ್ಯ, ಸಸ್ಯ -  ಕೀಟ, ಕೀಟ - ಸೂಕ್ಷ್ಮಾಣು ಜೀವಿ ಮೊದಲಾದ ಬೇರೆಬೇರೆ ಜೋಡಿಗಳ ನಡುವೆ ಸಹಬಾಳ್ವೆ ಒಂದು ಸಹಜ ಪ್ರಕ್ರಿಯೆ.

ಸೋಮವಾರ, ಜುಲೈ 24, 2017

ಜಿಬಿ, ಟಿಬಿ ಆದಮೇಲೆ?

ಟಿ. ಜಿ. ಶ್ರೀನಿಧಿ


ನಾವು ಟೈಪ್ ಮಾಡಿದ ಮಾಹಿತಿ - ಡೌನ್‌ಲೋಡ್ ಮಾಡಿ ತಂದ ಕಡತಗಳೆಲ್ಲ ಕಂಪ್ಯೂಟರಿನ ಮೆಮೊರಿಯಲ್ಲಿರುತ್ತವಲ್ಲ, ಅದೆಲ್ಲ ಕಂಪ್ಯೂಟರಿಗೆ ಅರ್ಥವಾಗಬೇಕಾದರೆ ಮೊದಲಿಗೆ ದ್ವಿಮಾನ ಪದ್ಧತಿಯ ಅಂಕಿಗಳಾಗಿ (೧ ಅಥವಾ ೦) ಬದಲಾದಾಗಬೇಕಾದ್ದು ಅನಿವಾರ್ಯ.

ದ್ವಿಮಾನ ಸಂಖ್ಯೆಯ ಆಂಗ್ಲ ಹೆಸರು ಬೈನರಿ ಡಿಜಿಟ್; ಈ ಹೆಸರಿನ ಮೊದಲ ಎರಡು ಹಾಗೂ ಕೊನೆಯದೊಂದು ಅಕ್ಷರಗಳನ್ನು ಸೇರಿಸಿ ಬಿಟ್ ಎಂಬ ಹೆಸರು ರೂಪಗೊಂಡಿದೆ. ಇದು ಮಾಹಿತಿಯ ಪ್ರಮಾಣ ಅಳೆಯಲು ಬಳಕೆಯಾಗುವ ಅತ್ಯಂತ ಸಣ್ಣ ಏಕಮಾನ.

ಗುರುವಾರ, ಜುಲೈ 20, 2017

ವಿಜ್ಞಾನದ ಇಜ್ಞಾನ: ಸಾರಾಯಿಯ ಚುಚ್ಚುಮದ್ದು ಜೀವರಕ್ಷಕ ಔಷಧವಾಗಬಹುದೇ?

ವಿನಾಯಕ ಕಾಮತ್

ಎಥೆನೋಲ್ ರಚನೆ
'ಸಾರಾಯಿಯ ಚುಚ್ಚುಮದ್ದು ಔಷಧವಾಗಬಹುದೇ?' ಎಂಬ ಪ್ರಶ್ನೆ ಯಾರಿಗಾದರೂ ಕೇಳಿದರೆ, ಎಂತಹ ನಿರಕ್ಷರಕುಕ್ಷಿಯೂ ನಕ್ಕಾನು. ಏಕೆಂದರೆ, ಹೆಂಡ-ಸಾರಾಯಿಗಳು ಎಂದಿಗೂ ಆರೋಗ್ಯಕ್ಕೆ ಹಾನಿಕರವೆಂಬುದು ಎಂಥವರಿಗೂ ಗೊತ್ತಿರುವ ಸತ್ಯ.  ಆದರೆ ಇಂತಹ ಸಾರಾಯಿಯಲ್ಲಿರುವ ಎಥೆನೋಲ್ (ethanol) ಎಂಬ ರಾಸಾಯನಿಕವೂ, ಸಂದರ್ಭಕ್ಕೆ ಜೀವರಕ್ಷಕ ಪ್ರತಿವಿಷವಾಗಬಹುದು ಎಂದರೆ ನೀವು ನಂಬಲೇಬೇಕು!

ಸೋಮವಾರ, ಜುಲೈ 17, 2017

ಡಿಜಿಟಲ್ ಲೋಕದ ಒಂದು ಮೊಟ್ಟೆಯ ಕತೆ!

ಟಿ. ಜಿ. ಶ್ರೀನಿಧಿ


ಈಚೆಗೆ, ಹ್ಯಾರಿ ಪಾಟರ್ ಸರಣಿಯ ಮೊದಲ ಪುಸ್ತಕದ ೨೦ನೇ ವಾರ್ಷಿಕೋತ್ಸವದ ಸಂದರ್ಭದಲ್ಲಿ, ಫೇಸ್‌ಬುಕ್‌ನಲ್ಲೊಂದು ವೈಶಿಷ್ಟ್ಯ ಕಾಣಿಸಿಕೊಂಡಿತ್ತು. ಹ್ಯಾರಿ ಪಾಟರ್‌ನದೋ ಆ ಸರಣಿಯಲ್ಲಿ ಬರುವ ಇತರ ಕೆಲ ಪಾತ್ರಗಳದೋ ಹೆಸರನ್ನು ನಮ್ಮ ಪೋಸ್ಟ್‌ನಲ್ಲಿ ಬರೆದರೆ ಅದು ಬೇರೆ ಬಣ್ಣದಲ್ಲಿ ಕಾಣಿಸಿಕೊಳ್ಳುತ್ತಿತ್ತು, ಅದರ ಮೇಲೆ ಕ್ಲಿಕ್ ಮಾಡಿದರೆ ಪರದೆಯ ಕೆಳಭಾಗದಲ್ಲಿ ಮಂತ್ರದಂಡವೊಂದು ಮೂಡಿ ಬಣ್ಣಬಣ್ಣದ ಚಿತ್ತಾರಗಳನ್ನೂ ಮೂಡಿಸುತ್ತಿತ್ತು!

ತಂತ್ರಾಂಶಗಳಲ್ಲಿ, ಜಾಲತಾಣಗಳಲ್ಲಿ ಕಾಣಸಿಗುವ ಇಂತಹ ವೈಶಿಷ್ಟ್ಯಗಳನ್ನು 'ಈಸ್ಟರ್ ಎಗ್'ಗಳೆಂದು ಕರೆಯುತ್ತಾರೆ.

ಗುರುವಾರ, ಜುಲೈ 13, 2017

ರೀಟೇಲ್ ಉದ್ಯಮದಲ್ಲೊಂದು ಹೊಸ ಸಂಚಲನ

ಉದಯ ಶಂಕರ ಪುರಾಣಿಕ

ಈ ಮೊದಲು ವಸತಿ ಪ್ರದೇಶಗಳಲ್ಲಿ ಚಿಲ್ಲರೆ ವ್ಯಾಪಾರಿಗಳು ಅಥವಾ ಕಿರಾಣಿ ಅಂಗಡಿಗಳು ಸಾಮಾನ್ಯವಾಗಿದ್ದವು. ನಂತರ ಡಿಪಾರ್ಟಮೆಂಟ್ ಸ್ಟೋರ್‌ಗಳು, ಸೂಪರ್ ಮಾರುಕಟ್ಟೆಗಳು, ಶಾಪಿಂಗ್ ಮಾಲ್‌ಗಳು ಬರಲಾರಂಭಿಸಿದವು. ದೂರವಾಣಿ ಕರೆ ಮಾಡಿ ಆರ್ಡರ್ ಮಾಡಿ, ನಿಮ್ಮ ಮನೆಗೆ ತಂದು ತಲುಪಿಸುತ್ತವೆ ಎನ್ನುವ ಪಿಜ್ಜಾ ಅಂಗಡಿಗಳಂತಹ ವ್ಯಾಪಾರ, ಡ್ರೈವ್ ಇನ್ ಶಾಪಿಂಗ್ ಮಾರುಕಟ್ಟೆ, ಅಂತರಜಾಲ ಮತ್ತು ಸ್ಮಾರ್ಟ್‌ಫೋನ್ ಬಳಸಿ ಮಾಡುವ ಆನ್‌ಲೈನ್ ಶಾಪಿಂಗ್ - ಹೀಗೆ ಗ್ರಾಹಕರಿಗೆ ವಿವಿಧ ರೀತಿಯ ಶಾಪಿಂಗ್ ಸೌಲಭ್ಯಗಳು ದೊರೆಯುತ್ತಿವೆ. ಇಷ್ಟೆಲ್ಲ ಬದಲಾಗಿರುವ ರೀಟೇಲ್ ಉದ್ಯಮದಲ್ಲಿ ಹೊಸ ಸಂಚಲನ ಮೂಡಿಸಿರುವುದು 'ಅಮೇಜಾನ್ ಗೋ' ಎಂಬ ಪರಿಕಲ್ಪನೆ.

ಸೋಮವಾರ, ಜುಲೈ 10, 2017

ಎಟಿಎಂ ಬಳಸುವಾಗ ಎಚ್ಚರವಹಿಸಿ!

ಟಿ. ಜಿ. ಶ್ರೀನಿಧಿ

ಕ್ರೆಡಿಟ್ ಕಾರ್ಡ್ - ಡೆಬಿಟ್ ಕಾರ್ಡುಗಳನ್ನು ಜಾಲತಾಣಗಳಲ್ಲಿ, ಅಂಗಡಿಗಳಲ್ಲಿ ಬಳಸುವಾಗ ಹುಷಾರಾಗಿರಬೇಕು ಎನ್ನುವುದು ನಮಗೆ ಪದೇಪದೇ ಕೇಳಸಿಗುವ ಸಲಹೆ. ಇಂತಹ ಸಂದರ್ಭಗಳಲ್ಲಿ ವಂಚನೆ ನಡೆಯುವ ಸಾಧ್ಯತೆ ಹೆಚ್ಚಿರುವುದರಿಂದ ಈ ಸಲಹೆಯನ್ನು ಪಾಲಿಸುವುದು ಅಪೇಕ್ಷಣೀಯವೂ ಹೌದು.

ಹಾಗೆಂದು ನಮ್ಮ ಕಾರ್ಡನ್ನು ಎಟಿಎಂ‌ಗಳಲ್ಲಿ ಬಳಸುವಾಗ ಎಚ್ಚರಿಕೆ ಬೇಡವೇ?

ಗುರುವಾರ, ಜುಲೈ 6, 2017

ಓಸಿಆರ್ ಎಂದರೇನು?

ಟಿ. ಜಿ. ಶ್ರೀನಿಧಿ

ಮುದ್ರಿತ ಅಥವಾ ಕೈಬರಹದ ಅಕ್ಷರಗಳನ್ನು ಕಂಪ್ಯೂಟರ್ ಸಹಾಯದಿಂದ ಗುರುತಿಸಲು ನೆರವಾಗುವುದು ಓಸಿಆರ್. ಇದು 'ಆಪ್ಟಿಕಲ್ ಕ್ಯಾರೆಕ್ಟರ್ ರೆಕಗ್ನಿಶನ್' ಎನ್ನುವುದರ ಹ್ರಸ್ವರೂಪ. ಕಂಪ್ಯೂಟರ್ ಹಾಗೂ ಮಾನವರ ನಡುವಿನ ಸಂವಹನದ ಹೊಸದೊಂದು ಆಯಾಮವನ್ನು ಪರಿಚಯಿಸುವ ತಂತ್ರಜ್ಞಾನ ಇದು.

ಸ್ಕ್ಯಾನ್ ಮಾಡಿಯೋ ಫೋಟೋ ಕ್ಲಿಕ್ಕಿಸಿಯೋ ಅಕ್ಷರಗಳನ್ನು ಕಂಪ್ಯೂಟರಿಗೆ ಊಡಿಸುತ್ತೇವಲ್ಲ, ಆ ಚಿತ್ರದಲ್ಲಿ ಇರಬಹುದಾದ ಬರಹವನ್ನು ಗುರುತಿಸುವುದು ಹೇಗೆ, ಗುರುತಿಸಿದ ಚಿತ್ರವನ್ನು ಪಠ್ಯರೂಪಕ್ಕೆ ಬದಲಿಸುವುದು ಹೇಗೆ ಎನ್ನುವುದನ್ನೆಲ್ಲ ಕಂಪ್ಯೂಟರಿಗೆ ಹೇಳಿಕೊಡುವುದು ಓಸಿಆರ್ ತಂತ್ರಾಂಶದ ಕೆಲಸ.

ಬುಧವಾರ, ಜುಲೈ 5, 2017

ವಿಜ್ಞಾನದ ಎರಡು ವಿಶಿಷ್ಟ ಕೃತಿಗಳು

ಇಜ್ಞಾನ ವಾರ್ತೆ

ಕರ್ನಾಟಕ ವಿಜ್ಞಾನ ಮತ್ತು ತಂತ್ರಜ್ಞಾನ ಅಕಾಡೆಮಿಯ ೨೦೧೬-೧೭ನೇ ಸಾಲಿನ ಶ್ರೇಷ್ಠ ಲೇಖಕ ಪ್ರಶಸ್ತಿ ಪ್ರದಾನ ಸಮಾರಂಭ ಈ ಬುಧವಾರ (ಜುಲೈ ೫, ೨೦೧೭) ಬೆಂಗಳೂರಿನಲ್ಲಿ ನಡೆಯಲಿದೆ. ವಿಜ್ಞಾನ ವಿಭಾಗದಲ್ಲಿ ತಮ್ಮ ಲೇಖಕರಿಗೆ ಈ ಪ್ರಶಸ್ತಿ ತಂದುಕೊಟ್ಟಿರುವ ಎರಡು ಕೃತಿಗಳ ಸಂಕ್ಷಿಪ್ತ ಪರಿಚಯ ಇಲ್ಲಿದೆ.  

ಸೋಮವಾರ, ಜುಲೈ 3, 2017

ಎಚ್‌ಡಿಎಂಐ: ಒಂದು ಪರಿಚಯ

ಟಿ. ಜಿ. ಶ್ರೀನಿಧಿ

ಉತ್ತಮ ಗುಣಮಟ್ಟದ ವೀಡಿಯೋ ಚಿತ್ರೀಕರಿಸುವುದು ಈಗ ಬಹಳ ಸುಲಭ. ವೀಡಿಯೋ ಕ್ಯಾಮೆರಾಗಳಲ್ಲಿ ಮಾತ್ರವೇ ಅಲ್ಲ, ಡಿಎಸ್‌ಎಲ್‌ಆರ್‌ಗಳಲ್ಲಿ, ಸಾಮಾನ್ಯ ಡಿಜಿಟಲ್ ಕ್ಯಾಮೆರಾಗಳಲ್ಲಿ, ಕಡೆಗೆ ಮೊಬೈಲ್ ಫೋನುಗಳಲ್ಲೂ ನಾವು ಸರಾಗವಾಗಿ ಎಚ್‌ಡಿ ವೀಡಿಯೋ ಚಿತ್ರೀಕರಿಸಿಕೊಳ್ಳಬಹುದು.

ಎಚ್‌ಡಿ ವೀಡಿಯೋ ಚಿತ್ರೀಕರಿಸಿ ಅದನ್ನು ಎಲ್ಲೋ ಒಂದು ಕಡೆ ಶೇಖರಿಸಿಟ್ಟುಬಿಟ್ಟರೆ ಆಯಿತೆ, ಅದನ್ನು ಅಷ್ಟೇ ಒಳ್ಳೆಯ ಗುಣಮಟ್ಟದಲ್ಲಿ ನೋಡಲೂಬೇಕಲ್ಲ? ಇದಕ್ಕೆ ನೆರವಾಗುವ ತಂತ್ರಜ್ಞಾನದ ಹೆಸರು ಎಚ್‌ಡಿಎಂಐ, ಅಂದರೆ ಹೈ ಡೆಫನಿಶನ್ ಮಲ್ಟಿಮೀಡಿಯಾ ಇಂಟರ್‌ಫೇಸ್.

ಶನಿವಾರ, ಜುಲೈ 1, 2017

ಪುಟ್ಟ-ಕಿಟ್ಟ ವಿಜ್ಞಾನ ಸಂವಾದ ಮಾಲಿಕೆ: ನವಕರ್ನಾಟಕದಿಂದ ಎಂಟು ಹೊಸ ಪುಸ್ತಕ

ಇಜ್ಞಾನ ವಾರ್ತೆ

ನವಕರ್ನಾಟಕ ಪ್ರಕಾಶನದ 'ಪುಟ್ಟ-ಕಿಟ್ಟ ವಿಜ್ಞಾನ ಸಂವಾದ' ಮಾಲಿಕೆಯ ಎಂಟು ಕೃತಿಗಳು ಇಂದು (ಜುಲೈ ೧, ೨೦೧೭) ಬೆಂಗಳೂರಿನಲ್ಲಿ ಬಿಡುಗಡೆಯಾಗಲಿವೆ. ಭೌತ ವಿಜ್ಞಾನದ ವಿಶ್ರಾಂತ ಪ್ರಾಧ್ಯಾಪಕ ಡಾ. ಎ. ಓ. ಆವಲಮೂರ್ತಿ ಈ ಪುಸ್ತಕಗಳನ್ನು ಬರೆದಿದ್ದಾರೆ.

badge