ಬುಧವಾರ, ಆಗಸ್ಟ್ 30, 2017

ಸ್ಮಾರ್ಟ್‌ಫೋನ್ ಒಳಗಿನ ಸಿಹಿ: ಆಂಡ್ರಾಯ್ಡ್

ಹೊಸ ಆವೃತ್ತಿಗೆ ಸಿಕ್ತು ಕ್ರೀಮ್ ಬಿಸ್ಕತ್ ಹೆಸರು!


ಟಿ. ಜಿ. ಶ್ರೀನಿಧಿ

ಕಂಪ್ಯೂಟರಿನಂತೆ ಕೆಲಸಮಾಡಬಲ್ಲ ಮೊಬೈಲ್ ಫೋನುಗಳನ್ನು ಸ್ಮಾರ್ಟ್‌ಫೋನ್ ಎಂದು ಕರೆಯುವುದು ವಾಡಿಕೆ. ಕಂಪ್ಯೂಟರಿನಂತೆಯೇ ಇವುಗಳಲ್ಲೂ ನಮ್ಮ ಆಯ್ಕೆಯ ತಂತ್ರಾಂಶಗಳನ್ನು ಇನ್‌ಸ್ಟಾಲ್ ಮಾಡಿಕೊಳ್ಳುವುದು, ಬಳಸುವುದು ಸಾಧ್ಯ.

ಸ್ಮಾರ್ಟ್‌ಫೋನೂ ಕಂಪ್ಯೂಟರಿನಂತೆಯೇ ಎಂದಮೇಲೆ ಕಂಪ್ಯೂಟರಿನಲ್ಲಿರುವಂತೆ ಅದರಲ್ಲೂ ಓಎಸ್ (ಆಪರೇಟಿಂಗ್ ಸಿಸ್ಟಂ, ಕಾರ್ಯಾಚರಣ ವ್ಯವಸ್ಥೆ) ಇರಬೇಕು - ಕಂಪ್ಯೂಟರಿನಲ್ಲಿ ವಿಂಡೋಸ್, ಲಿನಕ್ಸ್‌ಗಳೆಲ್ಲ ಇದ್ದಂತೆ. ಇತರ ತಂತ್ರಾಂಶಗಳನ್ನು ಇನ್‌ಸ್ಟಾಲ್ ಮಾಡಿಕೊಳ್ಳಲು, ಬಳಸಲು ಇದು ಸಹಾಯ ಮಾಡುತ್ತದೆ.

ಸ್ಮಾರ್ಟ್‍ಫೋನುಗಳಲ್ಲಿ ಬಳಕೆಯಾಗುವ ಓಎಸ್‍ಗಳ ಪೈಕಿ ಬಹಳ ಜನಪ್ರಿಯವಾಗಿರುವುದು, ನಮಗೆ ಚೆನ್ನಾಗಿ ಪರಿಚಯವಿರುವುದು ಆಂಡ್ರಾಯ್ಡ್. ಈ ಪರಿಚಯ ಎಷ್ಟರಮಟ್ಟಿನದು ಎಂದರೆ ಅನೇಕ ಮಂದಿ ಸ್ಮಾರ್ಟ್‌ಫೋನುಗಳನ್ನು ಆಂಡ್ರಾಯ್ಡ್ ಫೋನುಗಳೆಂದೇ ಗುರುತಿಸುತ್ತಾರೆ.

ಸೋಮವಾರ, ಆಗಸ್ಟ್ 28, 2017

ಮೊಬೈಲ್ ಆಪ್ ಮೂರು ವಿಧ

ಟಿ. ಜಿ. ಶ್ರೀನಿಧಿ


ಸ್ಮಾರ್ಟ್‌ಫೋನಿನಲ್ಲಿ ಆಪ್‌ಗಳನ್ನು ಇನ್‌ಸ್ಟಾಲ್ ಮಾಡಿಕೊಂಡು ಬಳಸುವುದು ನಮಗೆ ಚೆನ್ನಾಗಿಯೇ ಅಭ್ಯಾಸವಾಗಿರುವ ಸಂಗತಿ. ಬೇರೆಬೇರೆ ಉದ್ದೇಶಗಳಿಗೆ ಬೇರೆಬೇರೆ ಆಪ್‌ಗಳನ್ನು ಬಳಸಬೇಕೆನ್ನುವುದೂ ನಮಗೆ ಗೊತ್ತು.

ಆಪ್‌ಗಳ ಉದ್ದೇಶ ಬೇರೆಬೇರೆಯಾಗಿರುವಂತೆ ಅವುಗಳ ಕಾರ್ಯಾಚರಣೆಯ ಸ್ವರೂಪವೂ ಬೇರೆಬೇರೆಯಾಗಿರುವುದು ಸಾಧ್ಯ. ಈ ಅಂಶವನ್ನೇ ಆಧಾರವಾಗಿಟ್ಟುಕೊಂಡು ಯಾವುದೇ ಮೊಬೈಲ್ ಆಪ್‌ ಅನ್ನು ನೇಟಿವ್ ಆಪ್, ವೆಬ್ ಆಪ್ ಅಥವಾ ಹೈಬ್ರಿಡ್ ಆಪ್‌ ಎಂದು ಪ್ರತ್ಯೇಕವಾಗಿ ಗುರುತಿಸಬಹುದು.

ಗುರುವಾರ, ಆಗಸ್ಟ್ 24, 2017

ಜಿಯೋಫೋನ್ ಪ್ರಿ-ಬುಕಿಂಗ್ ಇಂದು ಸಂಜೆ ಪ್ರಾರಂಭ

ಇಜ್ಞಾನ ವಾರ್ತೆ


ರಿಲಯನ್ಸ್ ಜಿಯೋ ಸಂಸ್ಥೆಯ ಬಹುನಿರೀಕ್ಷಿತ ಜಿಯೋಫೋನ್ ಪ್ರಿ-ಬುಕಿಂಗ್ 2017 ಆಗಸ್ಟ್ 24ರ ಸಂಜೆ 5:30ಕ್ಕೆ ಪ್ರಾರಂಭವಾಗಲಿದೆ. ಇದೇ ವರ್ಷ ಜುಲೈ 21ರಂದು ರಿಲಯನ್ಸ್ ಇಂಡಸ್ಟ್ರೀಸ್ ವಾರ್ಷಿಕ ಸಾಮಾನ್ಯ ಸಭೆಯಲ್ಲಿ ಪರಿಚಯಿಸಲಾದ ಈ 4ಜಿ ಫೀಚರ್‌ಫೋನ್ ಗ್ರಾಹಕರಿಗೆ ಶೂನ್ಯ ವಾಸ್ತವಿಕ ಬೆಲೆಯಲ್ಲಿ, ಅಂದರೆ ಉಚಿತವಾಗಿ, ದೊರಕಲಿದೆ ಎಂದು ಸಂಸ್ಥೆಯ ಪ್ರಕಟಣೆ ಹೇಳಿದೆ.

ಸೋಮವಾರ, ಆಗಸ್ಟ್ 21, 2017

ವಿಜ್ಞಾನದ ಹೆದ್ದಾರಿಯಲ್ಲಿ ಮಹಾತಿರುವುಗಳು

ಇಜ್ಞಾನ ವಾರ್ತೆ 

ಕನ್ನಡದಲ್ಲಿ  ವಿಜ್ಞಾನ ಪುಸ್ತಕಗಳ ಪ್ರಕಟಣೆಗೆ ಹೆಸರುವಾಸಿಯಾದ ನವಕರ್ನಾಟಕ ಪ್ರಕಾಶನದಿಂದ ಇದೀಗ ಇನ್ನೊಂದು ವಿಶಿಷ್ಟ ಕೃತಿ ಪ್ರಕಟವಾಗುತ್ತಿದೆ. ವಿಜ್ಞಾನದ ವಿವಿಧ ಕ್ಷೇತ್ರಗಳ ಚಾರಿತ್ರಿಕ ಬೆಳವಣಿಗೆಯ ಹಾಗೂ ಆ ಹಾದಿಯಲ್ಲಿ ಅದು ಪಡೆದುಕೊಂಡ ಮಹಾತಿರುವುಗಳ ದಾಖಲೆಯಾದ 'ವಿಜ್ಞಾನದ ಹೆದ್ದಾರಿಯಲ್ಲಿ ಮಹಾತಿರುವುಗಳು' ಎಂಬ ಈ ಪುಸ್ತಕ ೨೦೧೭ರ ಸೆಪ್ಟೆಂಬರ್ ೩ರಂದು ಬಿಡುಗಡೆಯಾಗಲಿದೆ.

ಭೌತ ವಿಜ್ಞಾನ, ಖಭೌತ ವಿಜ್ಞಾನ, ಅಂತರಿಕ್ಷ ವಿಜ್ಞಾನ, ರಸಾಯನ ವಿಜ್ಞಾನ, ಸಸ್ಯ ವಿಜ್ಞಾನ, ಪ್ರಾಣಿ ವಿಜ್ಞಾನ,  ವೈದ್ಯ ವಿಜ್ಞಾನ, ಔಷಧಿ ವಿಜ್ಞಾನ, ವಿಧಿ ವಿಜ್ಞಾನ, ಕೃಷಿ ವಿಜ್ಞಾನ, ಭೂವಿಜ್ಞಾನ, ಪರಿಸರ ವಿಜ್ಞಾನ, ಗಣಿತ, ಎಂಜಿನಿಯರಿಂಗ್ ತಂತ್ರಜ್ಞಾನ, ದೂರಸಂಪರ್ಕ ಹಾಗೂ ಮಾಹಿತಿ ತಂತ್ರಜ್ಞಾನ ಕ್ಷೇತ್ರಗಳ ಕುರಿತು ಒಟ್ಟು ೩೫ ಲೇಖನಗಳಿರುವ ಈ ಕೃತಿಯ ಸಂಪಾದಕರು ಡಾ. ಟಿ. ಆರ್. ಅನಂತರಾಮು.

ಶುಕ್ರವಾರ, ಆಗಸ್ಟ್ 18, 2017

ಏನಿದು ಬೆಜ಼ೆಲ್?

ಟಿ. ಜಿ. ಶ್ರೀನಿಧಿ


ದಿವಾನಖಾನೆಯ ಟೀವಿ, ಕಂಪ್ಯೂಟರಿನ ಮಾನಿಟರ್, ಅಂಗೈಯ ಸ್ಮಾರ್ಟ್‌ಫೋನ್ - ಹೀಗೆ ಒಂದಲ್ಲ ಒಂದು ರೀತಿಯ ಪ್ರದರ್ಶಕಗಳು (ಡಿಸ್ಪ್ಲೇ) ನಮ್ಮ ಕಣ್ಣಿಗೆ ಬೀಳುತ್ತಲೇ ಇರುತ್ತವೆ. ಅವು ಬಳಸುವ ತಂತ್ರಜ್ಞಾನ ಬೇರೆಯದಿರಬಹುದು; ಆದರೆ ಅಂತಹ ಎಲ್ಲ ಪ್ರದರ್ಶಕಗಳಲ್ಲೂ ಪರದೆಯ ಸುತ್ತ ಒಂದು ಚೌಕಟ್ಟು ಇರುವುದು ಸರ್ವೇಸಾಮಾನ್ಯ.

ಬುಧವಾರ, ಆಗಸ್ಟ್ 16, 2017

ಸೆ.೧೫-೧೭ : ಬೆಂಗಳೂರಿನಲ್ಲಿ ಕನ್ನಡ ವಿಜ್ಞಾನ ಸಮ್ಮೇಳನ

ಇಜ್ಞಾನ ವಾರ್ತೆ



ಸ್ವದೇಶಿ ವಿಜ್ಞಾನ ಆಂದೋಳನ-ಕರ್ನಾಟಕದ ಆಶ್ರಯದಲ್ಲಿ ಬರುವ ಸೆಪ್ಟೆಂಬರ್ ೧೫ ರಿಂದ ೧೭ರವರೆಗೆ 'ಕನ್ನಡ ವಿಜ್ಞಾನ ಸಮ್ಮೇಳನ'ವನ್ನು (ಕರ್ನಾಟಕ ಸೈನ್ಸ್ ಕಾಂಗ್ರೆಸ್) ಆಯೋಜಿಸಲಾಗಿದೆ. ಈ ವರ್ಷದ ಕಾರ್ಯಕ್ರಮ ಬೆಂಗಳೂರಿನ ಎಂ. ಎಸ್. ರಾಮಯ್ಯ ಅನ್ವಯಿಕ ವಿಜ್ಞಾನಗಳ ವಿಶ್ವವಿದ್ಯಾಲಯದಲ್ಲಿ ನಡೆಯಲಿದೆ.

ಸೋಮವಾರ, ಆಗಸ್ಟ್ 14, 2017

ಈಗ ಮನೆಯೂ ಸ್ಮಾರ್ಟ್!

ಟಿ. ಜಿ. ಶ್ರೀನಿಧಿ


ಈಚಿನ ದಿನಗಳಲ್ಲಿ ಎಲ್ಲ ಸಾಧನಗಳೂ ಒಂದರ ನಂತರ ಒಂದರಂತೆ ಸ್ಮಾರ್ಟ್ ಆಗುತ್ತಿವೆ. ಸ್ಮಾರ್ಟ್ ಫೋನ್, ಸ್ಮಾರ್ಟ್ ಟೀವಿ, ಸ್ಮಾರ್ಟ್ ವಾಚ್ - ಹೀಗೆ ಮನೆಯ ಸಾಧನಗಳೆಲ್ಲ ಸ್ಮಾರ್ಟ್ ಆದಮೇಲೆ ಇನ್ನೇನು, ಪೂರ್ತಿ ಮನೆಯೂ ಸ್ಮಾರ್ಟ್ ಆಗುವುದೇ ಬಾಕಿ!

ಹೌದು, ಡಿಜಿಟಲ್ ತಂತ್ರಜ್ಞಾನದ ಅನುಕೂಲತೆಗಳನ್ನು ಪರಿಣಾಮಕಾರಿಯಾಗಿ ಬಳಸಿಕೊಳ್ಳುವ ಮನೆ, ಅರ್ಥಾತ್ 'ಸ್ಮಾರ್ಟ್ ಹೋಮ್'ಗಳು ಇದೀಗ ರೂಪುಗೊಳ್ಳುತ್ತಿವೆ. ಇಲ್ಲಿನ ಫ್ಯಾನು-ಲೈಟುಗಳನ್ನು ಮೊಬೈಲಿನಿಂದ ನಿಯಂತ್ರಿಸಬಹುದು, ಮನೆಯ ತಾಪಮಾನ-ಗಾಳಿಯ ಗುಣಮಟ್ಟದ ಮಾಹಿತಿಯನ್ನು ಮೊಬೈಲಿನಲ್ಲೇ ಪಡೆದುಕೊಳ್ಳಬಹುದು, ವಾಶಿಂಗ್ ಮಶೀನ್ - ಮೈಕ್ರೋವೇವ್ ಓವನ್ ಕೆಲಸಗಳನ್ನೆಲ್ಲ ಆಫೀಸಿನಲ್ಲಿ ಕುಳಿತೇ ಗಮನಿಸಿಕೊಳ್ಳಬಹುದು, ಸೆಕ್ಯೂರಿಟಿ ಕ್ಯಾಮೆರಾಗೆ ಕಾಣುತ್ತಿರುವ ದೃಶ್ಯಗಳನ್ನು ಸ್ಮಾರ್ಟ್‌ಫೋನಿನಲ್ಲಿ ನೋಡಬಹುದು.

ಗುರುವಾರ, ಆಗಸ್ಟ್ 10, 2017

ಜಲವಿವಾದ ಪರಿಹರಿಸಲು ತಂತ್ರಜ್ಞಾನ

ಉದಯ ಶಂಕರ ಪುರಾಣಿಕ

ಭವಿಷ್ಯದಲ್ಲಿ ನೀರಿಗಾಗಿ ಯುದ್ಧಗಳು ನಡೆಯುತ್ತವೆ ಎನ್ನುವ ಆತಂಕವನ್ನು ವಿಶ್ವಸಂಸ್ಥೆಯ ಮಾಜಿ ಮಹಾಪ್ರಧಾನ ಕಾರ್ಯದರ್ಶಿಯವರು ವ್ಯಕ್ತಪಡಿಸಿದ್ದರು. ಕಾವೇರಿ, ಕೃಷ್ಣೆ, ಮಹದಾಯಿ ಜಲವಿವಾದಗಳು ನಮಗೆ ಗೊತ್ತಿದ್ದರೆ, ವಿಶ್ವಾದ್ಯಂತ ಎಷ್ಟು ರಾಷ್ಟ್ರಗಳ ನಡುವೆ ಜಲವಿವಾದಗಳಿವೆ ಎನ್ನುವುದು ಗೊತ್ತಿರಲಾರದು.

ಕೆಲವು ಜಲವಿವಾದಗಳನ್ನು ಪರಿಹರಿಸಿಕೊಳ್ಳಲು ಅಧುನಿಕ ತಂತ್ರಜ್ಞಾನವನ್ನು ಯಶಸ್ವಿಯಾಗಿ ಬಳಸಿಕೊಳ್ಳಲಾಗುತ್ತಿದೆ. ಇಂತಹ ಒಂದು ಉದಾಹರಣೆ ಕುರಿತ ಮಾಹಿತಿ ಈ ಲೇಖನದಲ್ಲಿದೆ. ಕೃಷ್ಣೆ, ಮದಾಯಿ, ಕಾವೇರಿ ಮೊದಲಾದ ಜಲವಿವಾದಗಳಲ್ಲಿ ನ್ಯಾಯಾಲಯ ಮತ್ತು ಟ್ರಿಬ್ಯೂನಲ್ ಗಳಲ್ಲಿ ನೆಡೆಸಿರುವ ಕಾನೂನು ಹೋರಾಟಕ್ಕೆ ಪೂರಕವಾಗಿ ಅಧುನಿಕ ತಂತ್ರಜ್ಞಾನ ಪರಿಣಿತರ ಸೇವೆಯನ್ನು ಕೂಡಾ ರಾಜ್ಯ ಸರ್ಕಾರ ಬಳಸಿಕೊಳ್ಳಲು ಮುಂದಾಗಬೇಕಾಗಿದೆ.

ಸೋಮವಾರ, ಆಗಸ್ಟ್ 7, 2017

ಸಾಫ್ಟ್‌ವೇರ್, ಹಾರ್ಡ್‌ವೇರ್, ವೇಪರ್‌ವೇರ್!

ಟಿ. ಜಿ. ಶ್ರೀನಿಧಿ

ತಂತ್ರಜ್ಞಾನದ ಲೋಕದಲ್ಲಿ ಸದಾಕಾಲವೂ ಹೊಸ ಸಂಗತಿಗಳದೇ ಭರಾಟೆ. ಪ್ರತಿದಿನವೂ ಒಂದಲ್ಲ ಒಂದು ಹೊಸ ಯಂತ್ರಾಂಶ ಅಥವಾ ತಂತ್ರಾಂಶದ ಸುದ್ದಿ ಇಲ್ಲಿ ಕೇಳಸಿಗುತ್ತಲೇ ಇರುತ್ತದೆ.

ಆದರೆ ಹಾಗೆ ಸುದ್ದಿಮಾಡುವ ಎಲ್ಲ ಉತ್ಪನ್ನಗಳೂ ಹೇಳಿದ ಸಮಯಕ್ಕೆ ಮಾರುಕಟ್ಟೆಗೆ ಬರುವುದಿಲ್ಲ. ಈ ಪೈಕಿ ಕೆಲ ಉತ್ಪನ್ನಗಳು ಮಾರುಕಟ್ಟೆಗೆ ಬರುವುದು ತೀರಾ ನಿಧಾನವಾದರೆ ಇನ್ನು ಕೆಲವು ಪತ್ರಿಕಾಗೋಷ್ಠಿಯಿಂದಾಚೆಗೆ ಎಲ್ಲಿಯೂ ಕಾಣಿಸಿಕೊಳ್ಳುವುದೇ ಇಲ್ಲ.

ಗುರುವಾರ, ಆಗಸ್ಟ್ 3, 2017

ಡಿಜಿಟಲ್ ಲೋಕದಲ್ಲಿ ನಮ್ಮ ಹೆಜ್ಜೆಗುರುತು

ಟಿ. ಜಿ. ಶ್ರೀನಿಧಿ

ಮನೆಯಿಂದ ಹೊರಬಂದರೆ ಸಾಕು, ನಾವು ಹೋದಲ್ಲೆಲ್ಲ ಒಂದಲ್ಲ ಒಂದು ರೀತಿಯ ಕುರುಹುಗಳನ್ನು ಉಳಿಸುತ್ತಲೇ ಸಾಗುತ್ತೇವೆ. ನೀವು ಮನೆಯಿಂದ ಹೊರಹೋದದ್ದನ್ನು ಎದುರುಮನೆಯವರು ನೋಡಿರುತ್ತಾರೆ, ಪಕ್ಕದ ಬೀದಿಯ ಸಿಸಿಟಿವಿ ಕ್ಯಾಮೆರಾದಲ್ಲಿ ನಿಮ್ಮ ವಾಹನ ಹಾದುಹೋಗಿದ್ದು ದಾಖಲಾಗಿರುತ್ತದೆ, ಆಫೀಸಿಗೆ ಎಷ್ಟುಹೊತ್ತಿಗೆ ತಲುಪಿದಿರಿ ಎನ್ನುವುದನ್ನು ಕಚೇರಿಯ ಹಾಜರಾತಿ ವ್ಯವಸ್ಥೆ ಗುರುತಿಟ್ಟುಕೊಳ್ಳುತ್ತದೆ.

ಡಿಜಿಟಲ್ ಜಗತ್ತಿನಲ್ಲೂ ಹೀಗೆಯೇ.
badge