ಗುರುವಾರ, ಸೆಪ್ಟೆಂಬರ್ 28, 2017

ಮಾಹಿತಿ ಸುರಕ್ಷತೆಗೆ ಕ್ರಿಪ್ಟೋಗ್ರಫಿ

ಟಿ. ಜಿ. ಶ್ರೀನಿಧಿ

ಹಲವು ಸಂದರ್ಭಗಳಲ್ಲಿ ಮಾಹಿತಿ ವಿನಿಮಯಕ್ಕೆ ನೀಡುವಷ್ಟು, ಅಥವಾ ಅದಕ್ಕಿಂತ ಕೊಂಚ ಹೆಚ್ಚೇ, ಪ್ರಾಮುಖ್ಯವನ್ನು ಆ ವಿನಿಮಯ ಸುರಕ್ಷಿತವಾಗಿರುವಂತೆ ನೋಡಿಕೊಳ್ಳುವುದಕ್ಕೆ ಕೊಡಬೇಕಾಗುತ್ತದೆ. ವ್ಯಕ್ತಿಗಳಿಗೆ ಅಥವಾ ಸಂಸ್ಥೆಗಳಿಗೆ ಸಂಬಂಧಿಸಿದ ಖಾಸಗಿ ಮಾಹಿತಿ ಮೂರನೆಯವರ ಕೈಸೇರದಂತೆ ಕಾಪಾಡಿಕೊಳ್ಳಲು ಇದು ಅತ್ಯಗತ್ಯ. ಇಂತಹ ಸಂದರ್ಭಗಳಲ್ಲಿ ಕ್ರಿಪ್ಟೋಗ್ರಫಿ ಅತ್ಯಂತ ಮಹತ್ವ ಪಡೆದುಕೊಳ್ಳುತ್ತದೆ.

ಮಾಹಿತಿಯನ್ನು ಸುರಕ್ಷಿತ ರೂಪಕ್ಕೆ ಪರಿವರ್ತಿಸುವ ಮೂಲಕ ಅದನ್ನು ಜೋಪಾನಮಾಡುವ ವಿಜ್ಞಾನವೇ ಕ್ರಿಪ್ಟೋಗ್ರಫಿ. ಮಾಹಿತಿಯನ್ನು ಹೀಗೆ ಸುರಕ್ಷಿತ ರೂಪಕ್ಕೆ ಪರಿವರ್ತಿಸಲು, ಕಿಡಿಗೇಡಿಗಳ ಕೈಗೆ ಸಿಕ್ಕದಂತೆ - ನಾವು ಯಾರಿಗೆ ಕಳುಹಿಸಿದ್ದೆವೋ ಅವರಿಗೆ ಮಾತ್ರ ತಲುಪುವಂತೆ ನೋಡಿಕೊಳ್ಳಲು ಎನ್‍ಕ್ರಿಪ್‍ಶನ್ (ಗೂಢಲಿಪೀಕರಣ) ಎಂಬ ಪ್ರಕ್ರಿಯೆಯನ್ನು ಬಳಸಲಾಗುತ್ತದೆ.

ಸೋಮವಾರ, ಸೆಪ್ಟೆಂಬರ್ 25, 2017

ಜಿಪಿಎಸ್ ಕುಂಚ ಭೂಪಟವೇ ಕ್ಯಾನ್ವಾಸ್!

ಟಿ. ಜಿ. ಶ್ರೀನಿಧಿ


ಹೊಸ ಜಾಗಗಳಿಗೆ ಪ್ರಯಾಣ ಬೆಳೆಸುವಾಗ, ಹಳೆಯ ಊರಿನಲ್ಲಿ ಟ್ಯಾಕ್ಸಿ ಕರೆಸುವಾಗಲೆಲ್ಲ ಜಿಪಿಎಸ್ ಸೇವೆ ಬಳಸುವುದು ನಮಗೆ ಚೆನ್ನಾಗಿಯೇ ಅಭ್ಯಾಸವಾಗಿಬಿಟ್ಟಿದೆ. ಸಾಗರದಿಂದ ಕೆಳದಿಗೆ ಹೋಗಲು ಈ ರಸ್ತೆಯಲ್ಲಿ ತಿರುಗಿ ಎಂದೋ ನಿಮ್ಮ ಕ್ಯಾಬ್ ಪಕ್ಕದ ರಸ್ತೆಯಲ್ಲಿ ಬಂದು ನಿಂತಿದೆಯೆಂದೋ ನಮ್ಮ ಸ್ಮಾರ್ಟ್‌ಫೋನ್ ಹೇಳುತ್ತದಲ್ಲ, ಅದನ್ನು ಸಾಧ್ಯವಾಗಿಸುವುದು ಇದೇ ಜಿಪಿಎಸ್ ತಂತ್ರಜ್ಞಾನ. ಜಿಪಿಎಸ್ ಎನ್ನುವುದು ಗ್ಲೋಬಲ್ ಪೊಸಿಶನಿಂಗ್ ಸಿಸ್ಟಂ ಎಂಬ ಹೆಸರಿನ ಹ್ರಸ್ವರೂಪ.

ನಮ್ಮ ಗಮ್ಯಸ್ಥಾನ ಮುಟ್ಟಲು ಯಾವ ಮಾರ್ಗದಲ್ಲಿ ಪ್ರಯಾಣಿಸಬೇಕು ಎನ್ನುವುದನ್ನು ಮ್ಯಾಪ್ ತಂತ್ರಾಂಶ ಭೂಪಟದ ಮೇಲೆ ಚಿತ್ರಿಸಿ ತೋರಿಸುತ್ತದೆ. ಅದೇರೀತಿ ಟ್ಯಾಕ್ಸಿಯಲ್ಲಿ ಪ್ರಯಾಣಿಸಿದಾಗ ನಾವು ಯಾವ ಮಾರ್ಗದಲ್ಲಿ ಬಂದೆವು ಎನ್ನುವುದನ್ನು ಟ್ಯಾಕ್ಸಿ ಆಪ್ ನಮ್ಮ ರಸೀತಿಯ ಜೊತೆಯಲ್ಲೇ ಕಳಿಸುತ್ತದೆ. ಆ ತಂತ್ರಾಂಶಗಳಿಗೆ ಈ ಮಾಹಿತಿ ಸಿಗುವುದು ಮೊಬೈಲಿನಲ್ಲಿ (ಅಥವಾ ಕಾರಿನ ಮಾರ್ಗದರ್ಶಕ ಸಾಧನದಲ್ಲಿ) ಅಳವಡಿಸಲಾಗಿರುವ ಜಿಪಿಎಸ್ ರಿಸೀವರಿನಿಂದ.

ಗುರುವಾರ, ಸೆಪ್ಟೆಂಬರ್ 21, 2017

ಕ್ಯಾಮೆರಾ ಇಜ್ಞಾನ: ಎಚ್‌ಡಿಆರ್ ಎಂದರೇನು?

ಟಿ. ಜಿ. ಶ್ರೀನಿಧಿ


ಡಿಜಿಟಲ್ ಕ್ಯಾಮೆರಾಗಳ ಸ್ಥಾನವನ್ನು ಮೊಬೈಲುಗಳು ಆಕ್ರಮಿಸಿಕೊಳ್ಳುತ್ತಿದ್ದಂತೆ ಕ್ಯಾಮೆರಾಗಳಲ್ಲಿದ್ದ ಸೌಲಭ್ಯಗಳು ಒಂದರ ನಂತರ ಒಂದರಂತೆ ಮೊಬೈಲಿನಲ್ಲೂ ಕಾಣಿಸಿಕೊಳ್ಳುತ್ತಿವೆ. ಇಂತಹ ಸೌಲಭ್ಯಗಳ ಪೈಕಿ ಎಚ್‍ಡಿಆರ್ ಕೂಡ ಒಂದು.

ಎಚ್‍ಡಿಆರ್‌ ಎಂಬ ಹೆಸರು 'ಹೈ ಡೈನಮಿಕ್ ರೇಂಜ್' ಇಮೇಜಿಂಗ್ ಎನ್ನುವ ಪರಿಕಲ್ಪನೆಯನ್ನು ಪ್ರತಿನಿಧಿಸುತ್ತದೆ.  ಛಾಯಾಚಿತ್ರದಲ್ಲಿರುವ ನೆರಳು-ಬೆಳಕಿನ ಪ್ರಮಾಣಗಳ ನಡುವೆ ಸಮತೋಲನ ಮೂಡಿಸುವುದು ಹಾಗೂ ಆ ಮೂಲಕ ಚಿತ್ರದ ಗುಣಮಟ್ಟವನ್ನು ಹೆಚ್ಚಿಸುವುದು ಈ ಪರಿಕಲ್ಪನೆಯ ಉದ್ದೇಶ.

ಸೋಮವಾರ, ಸೆಪ್ಟೆಂಬರ್ 18, 2017

ಕಸ ಕಹಾನಿ: ತ್ಯಾಜ್ಯದ ಸಮರ್ಥ ವಿಲೇವಾರಿಗಾಗಿ ನಾವೇನು ಮಾಡಲು ಸಾಧ್ಯ?

'ಮೈತ್ರಿ'


ಒಂದೆರಡು ದಶಕಗಳ ಹಿಂದೆ ನಮ್ಮ ಬೆಂಗಳೂರು ಗಾರ್ಡನ್ ಸಿಟಿ ಆಗಿತ್ತು. ಆ ಹೆಸರಿನ ಸ್ಪೆಲಿಂಗು ಕೊಂಚ ಬದಲಾಗಿ ನಮ್ಮೂರು ಗಾರ್ಬೇಜ್ ಸಿಟಿ ಆಗಿದ್ದು ಈಚೆಗೆ ಕೆಲವರ್ಷಗಳ ಹಿಂದೆಯಷ್ಟೇ.

ಹಾಗೆ ನೋಡಿದರೆ ಕಸದ ಸಮಸ್ಯೆ ನಮ್ಮ ಊರೊಂದಕ್ಕೇ ಸೀಮಿತವೇನಲ್ಲ. ನಮ್ಮ ಊರಷ್ಟೇ ಏಕೆ, ಇರು ಬರೀ ನಮ್ಮ ಗ್ರಹದ ಸಮಸ್ಯೆ ಮಾತ್ರವೂ ಅಲ್ಲ.

ಶುಕ್ರವಾರ, ಸೆಪ್ಟೆಂಬರ್ 15, 2017

ಪೋರ್ಟ್ ಅಂದರೆ ಏನು?

ಟಿ. ಜಿ. ಶ್ರೀನಿಧಿ

ಪೋರ್ಟ್ ಅಂದರೆ ಬಂದರು. ದೋಣಿಗಳ, ಹಡಗುಗಳ ನಿಲ್ದಾಣ. ಏರ್‌ಪೋರ್ಟ್ ಅಂದರೆ ವಿಮಾನಗಳ ನಿಲ್ದಾಣ. ಇದು ನಮಗೆಲ್ಲ ಗೊತ್ತಿರುವ ವಿಷಯವೇ. ಈ ಲೇಖನದಲ್ಲಿ ನಾವು ಮಾತನಾಡುತ್ತಿರುವುದು ಮಾಹಿತಿ ತಂತ್ರಜ್ಞಾನ ಕ್ಷೇತ್ರದಲ್ಲಿ 'ಪೋರ್ಟ್' ಏನನ್ನು ಪ್ರತಿನಿಧಿಸುತ್ತದೆ ಎನ್ನುವುದರ ಬಗ್ಗೆ.

ಸಾಮಾನ್ಯ ಬಳಕೆದಾರರ ದೃಷ್ಟಿಯಲ್ಲಿ ಯೋಚಿಸುವುದಾದರೆ ಪೋರ್ಟ್ ಎಂದಾಕ್ಷಣ ಮೊಬೈಲ್ ಸೇವೆ ಒದಗಿಸುವ ಸಂಸ್ಥೆಯನ್ನು ಬದಲಿಸುವ ಪ್ರಕ್ರಿಯೆಯೇ ನಮ್ಮ ನೆನಪಿಗೆ ಬರುತ್ತದೆ. ಆದರೆ ಮಾಹಿತಿ ತಂತ್ರಜ್ಞಾನ ಕ್ಷೇತ್ರದಲ್ಲಿ ಪೋರ್ಟ್ ಎನ್ನುವುದಕ್ಕೆ ಇನ್ನೂ ಕೆಲವು ಅರ್ಥಗಳಿವೆ.

ಸೋಮವಾರ, ಸೆಪ್ಟೆಂಬರ್ 11, 2017

ಮನೆಯಲ್ಲೇ ಮಲ್ಟಿಪ್ಲೆಕ್ಸ್!

ಟಿ. ಜಿ. ಶ್ರೀನಿಧಿ


ಮನೆಯಲ್ಲಿ ಒಂದಕ್ಕಿಂತ ಹೆಚ್ಚು ಟೀವಿ ಇಟ್ಟುಕೊಳ್ಳುವುದು ಸಾಮಾನ್ಯ ಅಭ್ಯಾಸ. ರಿಮೋಟ್‌ ಕಂಟ್ರೋಲ್‌ಗಾಗಿ ನಡೆಯುವ ಜಗಳ ಬಗೆಹರಿಸುವ ದೃಷ್ಟಿಯಿಂದ ಇದು ಅನುಕೂಲಕರ, ನಿಜ. ಆದರೆ ಇಲ್ಲಿ ಸಮಸ್ಯೆಗಳೂ ಇವೆ: ಟೀವಿಗಳನ್ನು ಬೇಕೆಂದಾಗ ಬೇಕಾದ ಕೋಣೆಗೆ ವರ್ಗಾಯಿಸಿಕೊಳ್ಳುವುದು ಕಷ್ಟ, ಹಾಗೆಂದು ಕೋಣೆಗೊಂದು ಟೀವಿ ಕೊಳ್ಳುವುದೂ ಕಷ್ಟ. ಮನೆಯಿಂದ ಹೊರಗೆಲ್ಲೋ ಹೋಗುವಾಗ ಜೊತೆಯಲ್ಲೇ ಟೀವಿಯನ್ನೂ ಕೊಂಡೊಯ್ಯಬಹುದೇ ಎನ್ನುವುದಂತೂ ತೀರಾ ಹಾಸ್ಯಾಸ್ಪದವೆನಿಸುವ ಪ್ರಶ್ನೆ.

ಇವೆಲ್ಲ ಸಮಸ್ಯೆಗಳ ಗೊಡವೆಯಿಲ್ಲದೆ ಕೋಣೆಯ ಗೋಡೆ-ಸೀಲಿಂಗುಗಳನ್ನೇ ಪರದೆಯನ್ನಾಗಿಸಿಕೊಂಡು ನಮಗೆ ಬೇಕಾದ್ದನ್ನು ವೀಕ್ಷಿಸಲು ನೆರವಾಗುವುದು ಪ್ರೊಜೆಕ್ಟರುಗಳ ಹೆಗ್ಗಳಿಕೆ.

ಶುಕ್ರವಾರ, ಸೆಪ್ಟೆಂಬರ್ 8, 2017

ವೀಕೆಂಡ್ ವಿಶೇಷ: ಮಿಂಚು ಹುಳ ಮಿಂಚುವುದೇಕೆ?

ವಿನಾಯಕ ಕಾಮತ್


ಯಾವುದೋ ಒಂದು ಸುಂದರ ರಾತ್ರಿ. ಅಕಸ್ಮಾತ್ ಕರೆಂಟ್ ಹೋಗಿ ಬಿಟ್ಟಿದೆ. ಸುಮ್ಮನೆ ಹೊರಗೆ ಬಂದು ನಿಂತರೆ, ಬಗಲಿಗೆ ಎಲ್‌ಇಡಿ ಬಲ್ಬ್ ಕಟ್ಟಿಕೊಂಡಂತೆ ಹುಳಗಳು ಹಾರುತ್ತಿವೆ!

ಮಿಂಚು ಹುಳಗಳ ಬಗ್ಗೆ ಯಾರಿಗೆ ತಾನೇ ತಿಳಿದಿಲ್ಲ? ಕವಿಗಳಿಗಂತೂ ಅವು ಸುಲಭವಾಗಿ ಸಿಗುವ ಬೆರಗುಗಳು. ಇತ್ತೀಚಿಗೆ ನಾನು ಸಂಗೀತ ಪ್ರಧಾನವಾದ ಮರಾಠಿ ಚಲನಚಿತ್ರ ಒಂದನ್ನು ನೋಡಿದ್ದೆ. ಅದರಲ್ಲಂತೂ ಹಾಡುಗಾರ ಸಂಗೀತದ ಮೂಲಕವೇ ಮಿಂಚು ಹುಳಗಳ ದೊಂದಿ ತಯಾರಿಸಿಬಿಡುತ್ತಾನೆ. ಒಟ್ಟಿನಲ್ಲಿ ವಿಸ್ಮಯಗಳ ಮೂಟೆಯೇ ಆಗಿರುವ ನಿಸರ್ಗದ ಸುಂದರ ಸೃಷ್ಟಿ ಈ ಮಿಂಚು ಹುಳುಗಳು.

ಈ ಮಿಂಚು ಹುಳುಗಳು 'ಲ್ಯಾಂಪೆರಿಡೇ' ಎಂಬ ಕುಟುಂಬಕ್ಕೆ ಸೇರಿದ ಕೀಟಗಳು. ಹೆಚ್ಚಿನವು ನಿಶಾಚರಿಗಳು. ನಿಶಾಚರಿಗಳಾಗಿರುವುದರಿಂದಲೋ ಏನೋ, ತಮಗೆ ಬೇಕಾದ ಬೆಳಕಿನ ವ್ಯವಸ್ಥೆಯನ್ನು ತಾವೇ ಮಾಡಿಕೊಂಡು ಬಿಟ್ಟಿವೆ. ಆದರೆ ಇವು ಮಿಂಚುವುದು ಬೆಳಕಿಗಾಗಿ ಅಲ್ಲ. ಬದಲಾಗಿ ತಮ್ಮ ಆಹಾರವಾದ ಇತರೆ ಹುಳುಗಳನ್ನು ಆಕರ್ಷಿಸಲು, ಇನ್ನೂ ಮುಖ್ಯವಾಗಿ ತಮ್ಮ ಸಂಗಾತಿಗಳನ್ನು ಆಕರ್ಷಿಸಲು.

ಸೋಮವಾರ, ಸೆಪ್ಟೆಂಬರ್ 4, 2017

ಕಣ್ಣಿಗೆ ಕಾಣದ ಕಣ್ಮಣಿಗಳು: ಕೃತಕ ಉಪಗ್ರಹಗಳ ಕುರಿತು ನಿಮಗೆಷ್ಟು ಗೊತ್ತು?

ಟಿ. ಜಿ. ಶ್ರೀನಿಧಿ

ಕೃತಕ ಉಪಗ್ರಹಗಳ ಉಡಾವಣೆಯಲ್ಲಿ ಇಸ್ರೋ ಸಾಧಿಸುತ್ತಿರುವ ವಿಕ್ರಮಗಳ ಬಗ್ಗೆ ನಾವು ಕೇಳುತ್ತಲೇ ಇದ್ದೇವೆ. ಹಲವಾರು ವರ್ಷಗಳ ಹಿಂದೆ "ಇದೆಲ್ಲ ಭಾರತೀಯರಿಂದ ಆಗುವ ಕೆಲಸವಲ್ಲ" ಎನ್ನುವ ಕುಹಕ ವ್ಯಾಪಕವಾಗಿ ಕೇಳಿಬರುತ್ತಿದ್ದದ್ದೂ ಹಲವರಿಗೆ ಗೊತ್ತು.

ಉಪಗ್ರಹಗಳ ಬಗ್ಗೆ ಇಷ್ಟೆಲ್ಲ ಕೇಳಿದ್ದರೂ ಅವುಗಳ ಉಪಯೋಗವೇನು ಎನ್ನುವ ಬಗ್ಗೆ ನಮ್ಮಲ್ಲಿ ಅಷ್ಟೇನೂ ಸ್ಪಷ್ಟವಾದ ಚಿತ್ರಣ ಇಲ್ಲ. ಉಪಗ್ರಹಗಳು ಯಶಸ್ವಿಯಾಗಿ ಅಂತರಿಕ್ಷ ಸೇರಿದ ಬಗ್ಗೆ ದೊರಕುವಷ್ಟು ಮಾಹಿತಿ ಅವು ಅಲ್ಲಿ ಏನು ಮಾಡುತ್ತವೆ ಎನ್ನುವುದರ ಕುರಿತು ದೊರಕದೆ ಇರುವುದು ಇದಕ್ಕೆ ಪ್ರಮುಖ ಕಾರಣ ಇರಬಹುದೇನೋ.

ಹಾಗೆ ನೋಡಿದರೆ ನಮ್ಮ ದಿನನಿತ್ಯದ ಬದುಕಿನಲ್ಲಿ ಕೃತಕ ಉಪಗ್ರಹಗಳ ಪಾತ್ರ ಬಹಳ ದೊಡ್ಡದು. ಹಳ್ಳಿಯಿಂದ ದಿಲ್ಲಿಯವರೆಗೆ ಎಲ್ಲರ ಬದುಕನ್ನೂ ಅವು ಒಂದಲ್ಲ ಒಂದು ರೀತಿಯಲ್ಲಿ ಪ್ರಭಾವಿಸುತ್ತವೆ. ಅಂತರಿಕ್ಷದಲ್ಲಿರುವ ಉಪಗ್ರಹಗಳು ನಮ್ಮ ಕಣ್ಣಿಗೆ ಕಾಣುವುದಿಲ್ಲವಲ್ಲ, ಹಾಗೆಯೇ ಅವುಗಳ ಮಹತ್ವವೂ ನಮ್ಮ ಗಮನಕ್ಕೆ ಬಂದಿರುವುದಿಲ್ಲ ಅಷ್ಟೇ.

ಕಣ್ಣಿಗೆ ಕಾಣದ ಈ ಕಣ್ಮಣಿಗಳು ನಮ್ಮ ಬದುಕನ್ನು ಹೇಗೆಲ್ಲ ಪ್ರಭಾವಿಸುತ್ತವೆ? ಒಂದಷ್ಟು ಮಾಹಿತಿ ಇಲ್ಲಿದೆ.

ಶುಕ್ರವಾರ, ಸೆಪ್ಟೆಂಬರ್ 1, 2017

ವಿಜ್ಞಾನದ ಇಜ್ಞಾನ: ಬಣ್ಣಬಣ್ಣದ ಎಲೆ ಹಣ್ಣಾಗಿ ಉದುರುವ ಬಗೆ...

ಕ್ಷಮಾ ವಿ. ಭಾನುಪ್ರಕಾಶ್


ನವಿರಾದ ಚಿಗುರು ಎಲೆಗಳ ಬಣ್ಣ ಎಷ್ಟು ತಿಳಿ ಹಸಿರು. ಬಲಿತ ಎಲೆಗಳದ್ದು ಗಾಢ ಹಸಿರು ಬಣ್ಣವಾದರೆ ಉದುರಿಹೋಗುವ ಹಣ್ಣೆಲೆಗಳ ಬಣ್ಣ ಹಳದಿ ಅಥವಾ ಕೇಸರಿ. ಇದರ ಜೊತೆಗೆ ಕೆಂಪು, ಹಳದಿ, ಕೇಸರಿ ಬಣ್ಣದ ಎಲೆಗಳಿರೋ ಗಿಡಗಳನ್ನೂ ನಾವು ನೋಡಬಹುದು.

ಎಲೆಗಳು ಹಾಗೂ ಇಡೀ ಗಿಡದ ಬಣ್ಣವನ್ನು ನಿರ್ಧರಿಸುವುದು ಅವುಗಳಲ್ಲಿ ಅಡಗಿರುವ 'ವರ್ಣದ್ರವ್ಯ', ಅಂದರೆ 'ಪಿಗ್ಮೆಂಟ್'ಗಳು.

ಹಾಗಾದರೆ ಹಸಿರು ಎಲೆಗಳಲ್ಲಿರುವುದು ಹಸಿರು ವರ್ಣದ್ರವ್ಯ ಮಾತ್ರವೇ?
badge